ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಕೇಂದ್ರ ಸಚಿವ ಭಗವಂತ ಖೂಬಾಗೆ ಭವ್ಯ ಸ್ವಾಗತ

Last Updated 16 ಆಗಸ್ಟ್ 2021, 10:11 IST
ಅಕ್ಷರ ಗಾತ್ರ

ಬೀದರ್‌: ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲ, ರಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರಿಗೆ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಸೋಮವಾರ ಭವ್ಯ ಸ್ವಾಗತ ನೀಡಿದರು.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರಿಯ ವಿಮಾನ ನಿಲ್ದಾಣದಿಂದ ಬೀದರ್‌ ಜಿಲ್ಲೆಗೆ ಬಂದ ಕೇಂದ್ರ ಸಚಿವರಿಗೆ ರಾಜ್ಯದ ಗಡಿಯಲ್ಲೇ ಅಭಿಮಾನಿಗಳು ಶಾಲು ಹೊದಿಸಿ ಹೂವಿನ ಮಾಲೆ ಹಾಕಿ, ಪುಷ್ಪಗುಚ್ಛ ನೀಡಿಅಭಿನಂದಿಸಿದರು.

ನೇರವಾಗಿ ಸಿದ್ದಾರೂಢ ಮಠಕ್ಕೆ ಬಂದ ಸಚಿವರು ಶಿವಕುಮಾರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಸ್ವಾಮೀಜಿ ಶಾಲು ಹೊದಿಸಿ ಶುಭ ಕೋರಿದರು. ಅಲ್ಲಿಂದ ಹೊರಟ ಸಚಿವರು ಬಸವೇಶ್ವರ ವೃತ್ತಕ್ಕೆ ಬಂದು ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ತಂದನಂತರ ತೆರೆದ ಜೀಪಿನಲ್ಲಿ ಮೆರವಣಿಗೆಯಲ್ಲಿ ಸಾಗಿ ಭಗತ್‍ಸಿಂಗ್ ಪ್ರತಿಮೆ, ಡಾ.ಬಿ.ಆರ್.ಅಂಬೇಡ್ಕರ್, ಛತ್ರಪತಿ ಶಿವಾಜಿ, ಶರಣ ಹರಳಯ್ಯ ಹಾಗೂ ಮಡಿವಾಳ ಮಾಚಿದೇವ ಪುತ್ಥಳಿಗಳಿಗೆ ಮಾರ್ಲಾರ್ಪಣೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT