ನೇರವಾಗಿ ಸಿದ್ದಾರೂಢ ಮಠಕ್ಕೆ ಬಂದ ಸಚಿವರು ಶಿವಕುಮಾರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಸ್ವಾಮೀಜಿ ಶಾಲು ಹೊದಿಸಿ ಶುಭ ಕೋರಿದರು. ಅಲ್ಲಿಂದ ಹೊರಟ ಸಚಿವರು ಬಸವೇಶ್ವರ ವೃತ್ತಕ್ಕೆ ಬಂದು ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ತಂದನಂತರ ತೆರೆದ ಜೀಪಿನಲ್ಲಿ ಮೆರವಣಿಗೆಯಲ್ಲಿ ಸಾಗಿ ಭಗತ್ಸಿಂಗ್ ಪ್ರತಿಮೆ, ಡಾ.ಬಿ.ಆರ್.ಅಂಬೇಡ್ಕರ್, ಛತ್ರಪತಿ ಶಿವಾಜಿ, ಶರಣ ಹರಳಯ್ಯ ಹಾಗೂ ಮಡಿವಾಳ ಮಾಚಿದೇವ ಪುತ್ಥಳಿಗಳಿಗೆ ಮಾರ್ಲಾರ್ಪಣೆ ಮಾಡಿದರು.