<p><strong>ಔರಾದ್: </strong>ತಾಲ್ಲೂಕಿನಾದ್ಯಂತ ಭಾನುವಾರ ಸಂಜೆಯಿಂದ ಧಾರಾಕಾ ರವಾಗಿ ಮಳೆ ಸುರಿಯುತ್ತಿದೆ.</p>.<p>ವಡಗಾಂವ್, ಜಮಗಿ ಹೋಬಳಿಯಲ್ಲಿ ಮಳೆಯ ಪ್ರಮಾಣ ಜಾಸ್ತಿ ಇದೆ. ಹೀಗಾಗಿ ಈ ಪ್ರದೇಶದಲ್ಲಿ ಹೊಲಗಳಿಗೆ ನೀರು ನುಗ್ಗಿದೆ. ಜಡಿ ಮಳೆಯಿಂದ ಕೃಷಿ ಚವಟುವಟಿಕೆ ನಿಂತು ಹೋಗಿದೆ. ಇದರಿಂದಾಗಿ ಕಟಾಗಿವೆ ಬಂದ ಹೆಸರು ಬೆಳೆ ಮಳೆಯಲ್ಲಿ ತೊಯ್ದು ಹಾನಿಯಾಗುತ್ತಿದೆ.</p>.<p>ಕಳೆದ 1 ತಿಂಗಳಿನಿಂದ ಮಳೆ ಇಲ್ಲದೆ ಬೆಳೆಗಳು ಬಾಡುತ್ತಿದ್ದವು. ಭಾನುವಾರದಿಂದ ಬೀಳುತ್ತಿರುವ ಮಳೆ ಬೆಳೆಗಳಿಗೆ ಅನುಕೂಲವಾಗಿದೆ. ಆದರೆ ಕಟಾವು ಹಂತದಲ್ಲಿರುವ ಹೆಸರು ಇಳುವರಿ ಮೇಲೆ ಸ್ವಲ್ಪ ಪರಿಣಾಮವಾಗಲಿದೆ ಎಂದು ರೈತ ಗೋವಿಂದ ಇಂಗಳೆ ಹೇಳಿದ್ದಾರೆ.</p>.<p>ಮಳೆಯಿಂದ ಬೆಳೆ ಹಾನಿಯಾದರೆ ರೈತರು ತಕ್ಷಣ ವಿಮೆ ಕಂಪನಿಗೆ ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಎಂ. ಅನ್ಸಾರಿ ತಿಳಿಸಿದ್ದಾರೆ.</p>.<p>ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ವಿಮೆ ಮಾಡಿಸಿದ ರೈತರು ಪ್ರಕೃತಿ ವಿಕೋಪದಡಿ ಪರಿಹಾರ ಪಡೆಯಲು ಅವಕಾಶವಿದೆ. ಹೀಗಾಗಿ ಮಳೆ ಜಾಸ್ತಿಯಾಗಿ ಬೆಳೆ ಹಾನಿಯಾದರೆ 72 ಗಂಟೆಯೊಳಗೆ ವಿಮಾ ಕಂಪನಿಗೆ ಸಂಪರ್ಕಿಸಿ ದೂರು ನೀಡಬೇಕು.</p>.<p>1800-200-5142 ಅಥವಾ 1800-267-4030 ಸಹಾಯವಾಣಿಗೆ ಸಂಪರ್ಕಿಸಬೇಕು. ವಿಮೆ ಕಂಪನಿ ತಾಲ್ಲೂಕು ಸಂಯೋಜಕ ಪವನಸಿಂಗ್, ಮೊ:8971897192 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯುವಂತೆ ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್: </strong>ತಾಲ್ಲೂಕಿನಾದ್ಯಂತ ಭಾನುವಾರ ಸಂಜೆಯಿಂದ ಧಾರಾಕಾ ರವಾಗಿ ಮಳೆ ಸುರಿಯುತ್ತಿದೆ.</p>.<p>ವಡಗಾಂವ್, ಜಮಗಿ ಹೋಬಳಿಯಲ್ಲಿ ಮಳೆಯ ಪ್ರಮಾಣ ಜಾಸ್ತಿ ಇದೆ. ಹೀಗಾಗಿ ಈ ಪ್ರದೇಶದಲ್ಲಿ ಹೊಲಗಳಿಗೆ ನೀರು ನುಗ್ಗಿದೆ. ಜಡಿ ಮಳೆಯಿಂದ ಕೃಷಿ ಚವಟುವಟಿಕೆ ನಿಂತು ಹೋಗಿದೆ. ಇದರಿಂದಾಗಿ ಕಟಾಗಿವೆ ಬಂದ ಹೆಸರು ಬೆಳೆ ಮಳೆಯಲ್ಲಿ ತೊಯ್ದು ಹಾನಿಯಾಗುತ್ತಿದೆ.</p>.<p>ಕಳೆದ 1 ತಿಂಗಳಿನಿಂದ ಮಳೆ ಇಲ್ಲದೆ ಬೆಳೆಗಳು ಬಾಡುತ್ತಿದ್ದವು. ಭಾನುವಾರದಿಂದ ಬೀಳುತ್ತಿರುವ ಮಳೆ ಬೆಳೆಗಳಿಗೆ ಅನುಕೂಲವಾಗಿದೆ. ಆದರೆ ಕಟಾವು ಹಂತದಲ್ಲಿರುವ ಹೆಸರು ಇಳುವರಿ ಮೇಲೆ ಸ್ವಲ್ಪ ಪರಿಣಾಮವಾಗಲಿದೆ ಎಂದು ರೈತ ಗೋವಿಂದ ಇಂಗಳೆ ಹೇಳಿದ್ದಾರೆ.</p>.<p>ಮಳೆಯಿಂದ ಬೆಳೆ ಹಾನಿಯಾದರೆ ರೈತರು ತಕ್ಷಣ ವಿಮೆ ಕಂಪನಿಗೆ ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಎಂ. ಅನ್ಸಾರಿ ತಿಳಿಸಿದ್ದಾರೆ.</p>.<p>ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ವಿಮೆ ಮಾಡಿಸಿದ ರೈತರು ಪ್ರಕೃತಿ ವಿಕೋಪದಡಿ ಪರಿಹಾರ ಪಡೆಯಲು ಅವಕಾಶವಿದೆ. ಹೀಗಾಗಿ ಮಳೆ ಜಾಸ್ತಿಯಾಗಿ ಬೆಳೆ ಹಾನಿಯಾದರೆ 72 ಗಂಟೆಯೊಳಗೆ ವಿಮಾ ಕಂಪನಿಗೆ ಸಂಪರ್ಕಿಸಿ ದೂರು ನೀಡಬೇಕು.</p>.<p>1800-200-5142 ಅಥವಾ 1800-267-4030 ಸಹಾಯವಾಣಿಗೆ ಸಂಪರ್ಕಿಸಬೇಕು. ವಿಮೆ ಕಂಪನಿ ತಾಲ್ಲೂಕು ಸಂಯೋಜಕ ಪವನಸಿಂಗ್, ಮೊ:8971897192 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯುವಂತೆ ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>