<p>ಬೀದರ್: ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಗೂ ನಾಲ್ಕು ವರ್ಷದ ಪದವಿಯ ಧಿಡೀರ್ ಹೇರಿಕೆ ವಿರೋಧಿಸಿ ನಗರದಲ್ಲಿ ಮಂಗಳವಾರ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ಪದವಿಯ ಪ್ರಥಮ ವರ್ಷದ ತರಗತಿಗಳು ಆರಂಭವಾಗಿಲ್ಲ, ಎರಡು ತಿಂಗಳು ಕಳೆದರೂ ಪಠ್ಯಕ್ರಮ ಸಿದ್ಧಗೊಂಡಿಲ್ಲ.<br />ಕಾಲೇಜುಗಳಲ್ಲಿ ಬೋಧಕರ ಕೊರತೆ ಇದೆ. ಪಾಠ ಮಾಡಲು ಸಾಮಗ್ರಿಗಳ ಕೊರತೆ ಎದುರಗಾಗಿದೆ. ಪದವಿಯನ್ನು ಒಂದು ವರ್ಷ ವಿಸ್ತರಿಸಿರುವುದು ಹಲವು ಗೊಂದಲಗಳನ್ನು ಸೃಷ್ಟಿಸಿದೆ ಎಂದು ಎಐಡಿಎಸ್ಒ ಬೀದರ್ ಜಿಲ್ಲೆಯ ಸಹ ಸಂಚಾಲಕ ತುಳಜಾರಾಮ ಎನ್.ಕೆ. ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ಸೀಮಾ ದೇಶಪಾಂಡೆ, ಅತಿಥಿ ಉಪನ್ಯಾಸಕ ಅನಿಲಕುಮಾರ ಸಿಂಧೆ ಮಾತನಾಡಿದರು,</p>.<p>ಅತಿಥಿ ಉಪನ್ಯಾಸಕರಾದ ಬಾಲಜಿ, ಕಲ್ಮೇಶ, ದೇವರಾಜ ಪಾಟೀಲ ಪಂಡಿತ್ ಹಾಗಾಊ ವಿದ್ಯಾರ್ಥಿಗಳಾದ ಶಕಿಲ್, ಸತಿಶ್, ಅಕ್ಷತಾ, ಕಾವೇರಿ, ಜಯವರ್ಧನ್ ಅವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಗೂ ನಾಲ್ಕು ವರ್ಷದ ಪದವಿಯ ಧಿಡೀರ್ ಹೇರಿಕೆ ವಿರೋಧಿಸಿ ನಗರದಲ್ಲಿ ಮಂಗಳವಾರ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ಪದವಿಯ ಪ್ರಥಮ ವರ್ಷದ ತರಗತಿಗಳು ಆರಂಭವಾಗಿಲ್ಲ, ಎರಡು ತಿಂಗಳು ಕಳೆದರೂ ಪಠ್ಯಕ್ರಮ ಸಿದ್ಧಗೊಂಡಿಲ್ಲ.<br />ಕಾಲೇಜುಗಳಲ್ಲಿ ಬೋಧಕರ ಕೊರತೆ ಇದೆ. ಪಾಠ ಮಾಡಲು ಸಾಮಗ್ರಿಗಳ ಕೊರತೆ ಎದುರಗಾಗಿದೆ. ಪದವಿಯನ್ನು ಒಂದು ವರ್ಷ ವಿಸ್ತರಿಸಿರುವುದು ಹಲವು ಗೊಂದಲಗಳನ್ನು ಸೃಷ್ಟಿಸಿದೆ ಎಂದು ಎಐಡಿಎಸ್ಒ ಬೀದರ್ ಜಿಲ್ಲೆಯ ಸಹ ಸಂಚಾಲಕ ತುಳಜಾರಾಮ ಎನ್.ಕೆ. ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ಸೀಮಾ ದೇಶಪಾಂಡೆ, ಅತಿಥಿ ಉಪನ್ಯಾಸಕ ಅನಿಲಕುಮಾರ ಸಿಂಧೆ ಮಾತನಾಡಿದರು,</p>.<p>ಅತಿಥಿ ಉಪನ್ಯಾಸಕರಾದ ಬಾಲಜಿ, ಕಲ್ಮೇಶ, ದೇವರಾಜ ಪಾಟೀಲ ಪಂಡಿತ್ ಹಾಗಾಊ ವಿದ್ಯಾರ್ಥಿಗಳಾದ ಶಕಿಲ್, ಸತಿಶ್, ಅಕ್ಷತಾ, ಕಾವೇರಿ, ಜಯವರ್ಧನ್ ಅವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>