ಅನೇಕ ಯುವಕರು ಕೈಯಲ್ಲಿ ಖಡ್ಗ ಹಿಡಿದು ಗುರುದ್ವಾರ ಆವರಣದಿಂದ ಉದಗಿರ ರಸ್ತೆಯ ಪ್ರವೇಶ ಮಂಟಪದ ವರೆಗೂ ಅವೇಶ ಭರಿತರಾಗಿ ಓಡಿದರು. ಕುದುರೆಯ ಮೇಲೆ ಕುಳಿತ ಸವಾರ ನಗಾರಿ ಬಾರಿಸುತ್ತ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹುರಿದುಂಬಿಸಿದರು. ಯುವಕರು ಕತ್ತಿ ವರಸೆ, ಲಾಠಿ, ಬೆಂಕಿ ಚಕ್ರ ಪ್ರದರ್ಶನ ನೀಡಿದರು. ಮೆರವಣಿಗೆ ನಗರದ ಅಂಬೇಡ್ಕರ್ ವೃತ್ತದ ವರೆಗೆ ಹೋಗಿ ಮತ್ತೆ ಗುರುದ್ವಾರಕ್ಕೆ ಬಂದು ಸಮಾರೋಪಗೊಂಡಿತು.