<p><strong>ಬೀದರ್:</strong> ಔರಾದ್–ಬೀದರ್ ರಾಷ್ಟ್ರೀಯ ಹೆದ್ದಾರಿ ಹಾಗೂ ಮಾಂಜ್ರಾ ಸೇತುವೆಯ ಭಾಗದಲ್ಲಿ ಕುಸಿದಿರುವ ಭಾಗವನ್ನು ಒಂದು ವಾರದಲ್ಲಿ ದುರಸ್ತಿ ಪಡಿಸಿ ಸಂಚಾರಕ್ಕೆ ಅನುಕೂಲಮಾಡಿಕೊಡದಿದ್ದರೆ. ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಎಚ್ಚರಿಕೆ ನೀಡಿದ್ದಾರೆ.</p>.<p>ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭೂ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡಕರಿ<br />ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿರುವ ಗುರುನಾಥ ಅವರು ಗಡಿನಾಡ ಜನರ ಹಿತದೃಷ್ಟಿಯಿಂದ ಹೆದ್ದಾರಿ ದುರಸ್ತಿ ಕಾರ್ಯವನ್ನು ಶೀಘ್ರ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.<br /><br />ಔರಾದ್ ತಾಲ್ಲೂಕಿನಿಂದ ಜಿಲ್ಲಾ ಕೇಂದ್ರಕ್ಕೆ ಸಂಪರ್ಕಿಸುವ ಮಾರ್ಗದಲ್ಲಿರುವ ಮಾಂಜ್ರಾ ನದಿ ಸೇತುವೆ ಸ್ಥಳದಲ್ಲಿ ನಿರಂತರ ಮಳೆಯಿಂದ ಭೂಕುಸಿತವಾಗಿ ಅರ್ಧ ರಸ್ತೆ ಹಾಳಲಾಗಿದೆ. ಜಿಲ್ಲಾಡಳಿತ ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಿದೆ ಎಂದು ತಿಳಿಸಿದ್ದಾರೆ.</p>.<p>ರಾಷ್ಟ್ರೀಯ ಹೆದ್ದಾರಿಯ ಸಂಖ್ಯೆ 161(ಎ) ಮೇಲೆ ಕರ್ನಾಟಕ, ತೆಲಂಗಾಣ, ಹಾಗೂ ಮಹಾರಾಷ್ಟ್ರ ಪ್ರಯಾಣಿಕರು ನಿತ್ಯ ಪ್ರಯಾಣಿಸುತ್ತಾರೆ. ಸೇತುವೆ ಕುಸಿದರೆ ಸಂಪೂರ್ಣ ಸಂಚಾರ ಸ್ಥಗಿತಗೊಳ್ಳಲಿದೆ. ಹೆದ್ದಾರಿ ಸಂಪೂರ್ಣ ಕೆಟ್ಟಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ದ್ವಿಚಕ್ರವಾಹನ ಸವಾರರು ನಿತ್ಯ ಅಪಘಾತಕ್ಕೆಗೊಳಗಾಗುತ್ತಿದ್ದಾರೆ. ಹೆದ್ದಾರಿ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಔರಾದ್–ಬೀದರ್ ರಾಷ್ಟ್ರೀಯ ಹೆದ್ದಾರಿ ಹಾಗೂ ಮಾಂಜ್ರಾ ಸೇತುವೆಯ ಭಾಗದಲ್ಲಿ ಕುಸಿದಿರುವ ಭಾಗವನ್ನು ಒಂದು ವಾರದಲ್ಲಿ ದುರಸ್ತಿ ಪಡಿಸಿ ಸಂಚಾರಕ್ಕೆ ಅನುಕೂಲಮಾಡಿಕೊಡದಿದ್ದರೆ. ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಎಚ್ಚರಿಕೆ ನೀಡಿದ್ದಾರೆ.</p>.<p>ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭೂ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡಕರಿ<br />ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿರುವ ಗುರುನಾಥ ಅವರು ಗಡಿನಾಡ ಜನರ ಹಿತದೃಷ್ಟಿಯಿಂದ ಹೆದ್ದಾರಿ ದುರಸ್ತಿ ಕಾರ್ಯವನ್ನು ಶೀಘ್ರ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.<br /><br />ಔರಾದ್ ತಾಲ್ಲೂಕಿನಿಂದ ಜಿಲ್ಲಾ ಕೇಂದ್ರಕ್ಕೆ ಸಂಪರ್ಕಿಸುವ ಮಾರ್ಗದಲ್ಲಿರುವ ಮಾಂಜ್ರಾ ನದಿ ಸೇತುವೆ ಸ್ಥಳದಲ್ಲಿ ನಿರಂತರ ಮಳೆಯಿಂದ ಭೂಕುಸಿತವಾಗಿ ಅರ್ಧ ರಸ್ತೆ ಹಾಳಲಾಗಿದೆ. ಜಿಲ್ಲಾಡಳಿತ ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಿದೆ ಎಂದು ತಿಳಿಸಿದ್ದಾರೆ.</p>.<p>ರಾಷ್ಟ್ರೀಯ ಹೆದ್ದಾರಿಯ ಸಂಖ್ಯೆ 161(ಎ) ಮೇಲೆ ಕರ್ನಾಟಕ, ತೆಲಂಗಾಣ, ಹಾಗೂ ಮಹಾರಾಷ್ಟ್ರ ಪ್ರಯಾಣಿಕರು ನಿತ್ಯ ಪ್ರಯಾಣಿಸುತ್ತಾರೆ. ಸೇತುವೆ ಕುಸಿದರೆ ಸಂಪೂರ್ಣ ಸಂಚಾರ ಸ್ಥಗಿತಗೊಳ್ಳಲಿದೆ. ಹೆದ್ದಾರಿ ಸಂಪೂರ್ಣ ಕೆಟ್ಟಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ದ್ವಿಚಕ್ರವಾಹನ ಸವಾರರು ನಿತ್ಯ ಅಪಘಾತಕ್ಕೆಗೊಳಗಾಗುತ್ತಿದ್ದಾರೆ. ಹೆದ್ದಾರಿ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>