ರಾಷ್ಟ್ರೀಯ ಹೆದ್ದಾರಿಯ ಸಂಖ್ಯೆ 161(ಎ) ಮೇಲೆ ಕರ್ನಾಟಕ, ತೆಲಂಗಾಣ, ಹಾಗೂ ಮಹಾರಾಷ್ಟ್ರ ಪ್ರಯಾಣಿಕರು ನಿತ್ಯ ಪ್ರಯಾಣಿಸುತ್ತಾರೆ. ಸೇತುವೆ ಕುಸಿದರೆ ಸಂಪೂರ್ಣ ಸಂಚಾರ ಸ್ಥಗಿತಗೊಳ್ಳಲಿದೆ. ಹೆದ್ದಾರಿ ಸಂಪೂರ್ಣ ಕೆಟ್ಟಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ದ್ವಿಚಕ್ರವಾಹನ ಸವಾರರು ನಿತ್ಯ ಅಪಘಾತಕ್ಕೆಗೊಳಗಾಗುತ್ತಿದ್ದಾರೆ. ಹೆದ್ದಾರಿ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.