‘ಅಶಿಸ್ತಿನ ಕಾರಣಕ್ಕೆ ಕೆಲ ತಿಂಗಳ ಹಿಂದೆ ಇಬ್ಬರು ಶಿಕ್ಷಕರನ್ನು ಕೆಲಸದಿಂದ ತೆಗೆದುಹಾಕಿದ್ದೆವು. ಶಾಲೆಯ ಹೆಸರನ್ನು ಕೆಡಿಸಲು ಅವರೇ ಈ ರೀತಿ ಗೊಂದಲ ಸೃಷ್ಟಿಸಿದ್ದಾರೆ. ಶುಲ್ಕ ಕಟ್ಟದಿದ್ದರೂ ಮಕ್ಕಳನ್ನು ಪರೀಕ್ಷೆಗೆ ಕೂರಿಸಿದ್ದೇವೆ. ಆದರೆ, ಆ ಶಿಕ್ಷಕರು ಪೋಷಕರ ತಲೆ ಕೆಡಿಸಿ ಪರೀಕ್ಷೆ ಬರೆಯುತ್ತಿದ್ದ ಮಕ್ಕಳನ್ನು ಬಲವಂತವಾಗಿ ಕರೆದುಕೊಂಡು ಹೋಗುವಂತೆ ಮಾಡಿದ್ದಾರೆ’ ಎಂದು ಶಾಲಾ ಆಡಳಿತ ಮಂಡಳಿಯವರು ದೂರಿದ್ದಾರೆ.