<p><strong>ಬೀದರ್: </strong>ಜೀವನದ ಗುರಿ ಸಾಧನೆಗೆ ಕಠಿಣ ಪರಿಶ್ರಮ ಹಾಗೂ ಗುರುವಿನ ಮಾರ್ಗದರ್ಶನ ಅಗತ್ಯ ಎಂದು ಪ್ರಾಚಾರ್ಯ ಚಂದ್ರಪ್ಪ ಭತಮುರ್ಗೆ ಅಭಿಪ್ರಾಯಪಟ್ಟರು.</p>.<p>ನಗರದ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಧರ್ಮ ಹಾಗೂ ಕೀರ್ತಿ ಶಾಶ್ವತ ಮೌಲ್ಯಗಳಾಗಿವೆ. ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ಪ್ರಾಚಾರ್ಯ ಮಾಣಿಕರಾವ್ ಪಂಚಾಳ ಮಾತನಾಡಿ, ಶಿಷ್ಯನ ಅಜ್ಞಾನ ಕಳೆದು ಸುಜ್ಞಾನಿಯನ್ನಾಗಿ ಮಾಡುವ ಶಕ್ತಿ ಗುರುವಿಗೆ ಇದೆ. ಹೀಗಾಗಿ ಗುರುವನ್ನು ಗೌರವಿಸಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕು ಎಂದು ತಿಳಿಸಿದರು.</p>.<p>ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ ಪ್ರೌಢಶಾಲೆ ಮುಖ್ಯ ಶಿಕ್ಷಕ ಲಕ್ಷ್ಮಣ ಪೂಜಾರಿ ಮಾತನಾಡಿ, ಸಂಸ್ಕಾರ ಇಲ್ಲದ ಶರೀರ ಜೀವಂತ ಶವ ಇದ್ದಂತೆ. ವಿದ್ಯಾರ್ಥಿಗಳು ದೇಶಪ್ರೇಮ, ಭಾಷಾ ಪ್ರೇಮ, ಬಂಧು ಪ್ರೇಮ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ವತ್ರ ತಿಪ್ಪೆಯೊಳಗಿದ್ದರೂ ಹೊಳೆಯುತ್ತದೆ. ಹಾಗೆಯೇ ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆದು ಪ್ರಕಾಶಿಸಬೇಕು ಎಂದು ತಿಳಿಸಿದರು.</p>.<p>ಉಪನ್ಯಾಸಕ ರಮೇಶ ಪಾಟೀಲ ಚಟ್ನಳ್ಳಿ ಮಾತನಾಡಿ, ವರ್ಷಕ್ಕೊಮ್ಮೆ ಶಿಕ್ಷಕರ ದಿನ ಆಚರಿಸಿದರೆ ಸಾಲದು. ಗುರು ಆದವರು ರಾಧಾಕೃಷ್ಣನ್ ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಹೇಳಿದರು.</p>.<p>ಪ್ರತಿಭಾವಂತ ವಿದ್ಯಾರ್ಥಿಗಳಾದ ಅಂಜಲಿ, ವೆಂಕಟೇಶ ಅವರನ್ನು ಸನ್ಮಾನಿಸಲಾಯಿತು.</p>.<p>ಉಪನ್ಯಾಸಕರಾದ ಶಶಿಕಾಂತ ಪಂತ್, ಎಸ್.ಎಂ. ಐನಾಪುರ, ಈರಣ್ಣ ಕೆ, ಚಂದ್ರಕಲಾ, ವಿಜಯಕುಮಾರ ಲಕ್ಕಾ, ನಾಗನಾಥ ಕೊಳ್ಳಾ, ಶಿವಪುತ್ರ ಶಿನ್ನೂರ ಇದ್ದರು. ಬಸವರಾಜ ಹೆಗ್ಗೆ ನಿರೂಪಿಸಿದರು. ಗೌತಮ ಭೋಸ್ಲೆ ವಂದಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಜೀವನದ ಗುರಿ ಸಾಧನೆಗೆ ಕಠಿಣ ಪರಿಶ್ರಮ ಹಾಗೂ ಗುರುವಿನ ಮಾರ್ಗದರ್ಶನ ಅಗತ್ಯ ಎಂದು ಪ್ರಾಚಾರ್ಯ ಚಂದ್ರಪ್ಪ ಭತಮುರ್ಗೆ ಅಭಿಪ್ರಾಯಪಟ್ಟರು.</p>.<p>ನಗರದ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಧರ್ಮ ಹಾಗೂ ಕೀರ್ತಿ ಶಾಶ್ವತ ಮೌಲ್ಯಗಳಾಗಿವೆ. ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ಪ್ರಾಚಾರ್ಯ ಮಾಣಿಕರಾವ್ ಪಂಚಾಳ ಮಾತನಾಡಿ, ಶಿಷ್ಯನ ಅಜ್ಞಾನ ಕಳೆದು ಸುಜ್ಞಾನಿಯನ್ನಾಗಿ ಮಾಡುವ ಶಕ್ತಿ ಗುರುವಿಗೆ ಇದೆ. ಹೀಗಾಗಿ ಗುರುವನ್ನು ಗೌರವಿಸಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕು ಎಂದು ತಿಳಿಸಿದರು.</p>.<p>ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ ಪ್ರೌಢಶಾಲೆ ಮುಖ್ಯ ಶಿಕ್ಷಕ ಲಕ್ಷ್ಮಣ ಪೂಜಾರಿ ಮಾತನಾಡಿ, ಸಂಸ್ಕಾರ ಇಲ್ಲದ ಶರೀರ ಜೀವಂತ ಶವ ಇದ್ದಂತೆ. ವಿದ್ಯಾರ್ಥಿಗಳು ದೇಶಪ್ರೇಮ, ಭಾಷಾ ಪ್ರೇಮ, ಬಂಧು ಪ್ರೇಮ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ವತ್ರ ತಿಪ್ಪೆಯೊಳಗಿದ್ದರೂ ಹೊಳೆಯುತ್ತದೆ. ಹಾಗೆಯೇ ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆದು ಪ್ರಕಾಶಿಸಬೇಕು ಎಂದು ತಿಳಿಸಿದರು.</p>.<p>ಉಪನ್ಯಾಸಕ ರಮೇಶ ಪಾಟೀಲ ಚಟ್ನಳ್ಳಿ ಮಾತನಾಡಿ, ವರ್ಷಕ್ಕೊಮ್ಮೆ ಶಿಕ್ಷಕರ ದಿನ ಆಚರಿಸಿದರೆ ಸಾಲದು. ಗುರು ಆದವರು ರಾಧಾಕೃಷ್ಣನ್ ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಹೇಳಿದರು.</p>.<p>ಪ್ರತಿಭಾವಂತ ವಿದ್ಯಾರ್ಥಿಗಳಾದ ಅಂಜಲಿ, ವೆಂಕಟೇಶ ಅವರನ್ನು ಸನ್ಮಾನಿಸಲಾಯಿತು.</p>.<p>ಉಪನ್ಯಾಸಕರಾದ ಶಶಿಕಾಂತ ಪಂತ್, ಎಸ್.ಎಂ. ಐನಾಪುರ, ಈರಣ್ಣ ಕೆ, ಚಂದ್ರಕಲಾ, ವಿಜಯಕುಮಾರ ಲಕ್ಕಾ, ನಾಗನಾಥ ಕೊಳ್ಳಾ, ಶಿವಪುತ್ರ ಶಿನ್ನೂರ ಇದ್ದರು. ಬಸವರಾಜ ಹೆಗ್ಗೆ ನಿರೂಪಿಸಿದರು. ಗೌತಮ ಭೋಸ್ಲೆ ವಂದಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>