<p><strong>ಭಾಲ್ಕಿ</strong>: ‘ಸನ್ನಡತೆಯೇ ಮನುಷ್ಯನ ನಿಜವಾದ ಸಂಪತ್ತು’ ಎಂದು ಹುಲಸೂರಿನ ಶಿವಾನಂದ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಧರ್ಮಸಭೆ ಉದ್ಘಾಟಿಸಿ ಮಾತನಾಡಿದರು.</p>.<p>ಆಸ್ತಿ, ಅಂತಸ್ತು, ಅಧಿಕಾರಗಳು ಶಾಶ್ವತ ಅಲ್ಲ. ಜೀವನದ ಸಾರ್ಥಕತೆಗಾಗಿ ಮನುಷ್ಯ ಉತ್ತಮ ಆಚಾರ, ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ನೇತೃತ್ವ ವಹಿಸಿದ್ದ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ಮಾತನಾಡಿ,‘ಮನುಷ್ಯನ ನಡೆ-ನುಡಿ ಒಂದೇ ಆಗಿರಬೇಕು’ ಎಂದು ಹೇಳಿದರು.</p>.<p>ಮಾತಿನ ಮಹತ್ವ ಬಹಳ ಇದೆ. ಆದ್ದರಿಂದಲೇ ಶರಣರು ಮಾತನ್ನು ಜ್ಯೋತಿರ್ಲಿಂಗಕ್ಕೆ ಹೋಲಿಸಿದ್ದಾರೆ. ಪ್ರಜ್ಞಾ ಪೂರ್ವಕವಾಗಿ ಮಾತುಗಳನ್ನು ಆಡಬೇಕು. ಮಾತುಗಳು ಎದು ರಿನವರ ಮನಸ್ಸು ಅರಳಿಸುವಂತಿರಬೇಕು. ಬೇಸರ, ದುಃಖ ದೂರ ಮಾ ಡುವಂತಿರಬೇಕು. ಬೇರೆಯವರಿಗೆ ನೋವು ಉಂಟು ಮಾಡುವಂತೆ ಇರಬಾರದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ‘ಸನ್ನಡತೆಯೇ ಮನುಷ್ಯನ ನಿಜವಾದ ಸಂಪತ್ತು’ ಎಂದು ಹುಲಸೂರಿನ ಶಿವಾನಂದ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಧರ್ಮಸಭೆ ಉದ್ಘಾಟಿಸಿ ಮಾತನಾಡಿದರು.</p>.<p>ಆಸ್ತಿ, ಅಂತಸ್ತು, ಅಧಿಕಾರಗಳು ಶಾಶ್ವತ ಅಲ್ಲ. ಜೀವನದ ಸಾರ್ಥಕತೆಗಾಗಿ ಮನುಷ್ಯ ಉತ್ತಮ ಆಚಾರ, ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ನೇತೃತ್ವ ವಹಿಸಿದ್ದ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ಮಾತನಾಡಿ,‘ಮನುಷ್ಯನ ನಡೆ-ನುಡಿ ಒಂದೇ ಆಗಿರಬೇಕು’ ಎಂದು ಹೇಳಿದರು.</p>.<p>ಮಾತಿನ ಮಹತ್ವ ಬಹಳ ಇದೆ. ಆದ್ದರಿಂದಲೇ ಶರಣರು ಮಾತನ್ನು ಜ್ಯೋತಿರ್ಲಿಂಗಕ್ಕೆ ಹೋಲಿಸಿದ್ದಾರೆ. ಪ್ರಜ್ಞಾ ಪೂರ್ವಕವಾಗಿ ಮಾತುಗಳನ್ನು ಆಡಬೇಕು. ಮಾತುಗಳು ಎದು ರಿನವರ ಮನಸ್ಸು ಅರಳಿಸುವಂತಿರಬೇಕು. ಬೇಸರ, ದುಃಖ ದೂರ ಮಾ ಡುವಂತಿರಬೇಕು. ಬೇರೆಯವರಿಗೆ ನೋವು ಉಂಟು ಮಾಡುವಂತೆ ಇರಬಾರದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>