ಬೊಮ್ಮಗೊಂಡೇಶ್ವರ ವೃತ್ತ ಸಮೀಪ ರೈಲ್ವೆ ಮೇಲ್ಸೇತುವೆ ಕೆಳಗಿನ ರಸ್ತೆಯಲ್ಲೂ ಅಪಾರ ಪ್ರಮಾಣದಲ್ಲಿ ನೀರು ನಿಂತುಕೊಂಡಿತ್ತು. ರೋಟರಿ ವೃತ್ತ ಹಾಗೂ ಕೆಇಬಿ ಕಚೇರಿ ಮುಂಭಾಗದ ರಸ್ತೆ ಮೇಲೂ ನೀರು ನಿಂತುಕೊಂಡಿತ್ತು. ಸಂಜೆಯ ವೇಳೆಗೆ ನೀರು ಹರಿದು ಹೋಗಿ ಸಂಚಾರ ಸುಗಮಗೊಂಡಿತು. ಭಾಲ್ಕಿ, ಹುಮನಾಬಾದ್ ಹಾಗೂ ಔರಾದ್ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.