ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಟಕಚಿಂಚೋಳಿ: ತಿರಂಗ ಜಾಗೃತಿ ಜಾಥಾ

Last Updated 10 ಆಗಸ್ಟ್ 2022, 4:24 IST
ಅಕ್ಷರ ಗಾತ್ರ

ಖಟಕಚಿಂಚೋಳಿ: ಸಮೀಪದ ನೀಲಮನಹಳ್ಳಿ ಗ್ರಾಮದ ಗೆಳೆಯರ ಬಳಗದ ಸದಸ್ಯರು ಸೋಮವಾರ ಬೈಕ್‌ಗಳ ಮೂಲಕ ವಿವಿಧ ಗ್ರಾಮಗಳಿಗೆ ತೆರಳಿ ‘ಹರ್ ಘರ್ ತಿರಂಗ’ ಅಭಿಯಾನದ ಕುರಿತು ಜಾಗೃತಿ ಮೂಡಿಸಿದರು.

ಬೆಳಿಗ್ಗೆ 8 ಗಂಟೆಗೆ ನೂರಾರು ಬೈಕ್‌ಗಳಲ್ಲಿ ಹೊರಟ ಗೆಳೆಯರ ತಂಡ ಪ್ರತಿಯೊಂದು ವಾಹನಕ್ಕೆ ರಾಷ್ಟ್ರಧ್ವಜ ಕಟ್ಟಿಕೊಂಡು ಕಣಜಿ, ಬ್ಯಾಲಹಳ್ಳಿ, ಹುಣಜಿ, ಜ್ಯಾಂತಿ, ರುದನೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಮೇಲೆ ಧ್ವಜಾರೋಹಣ ನೆರವೇರಿಸಿ ಸಂಭ್ರಮಿಸಬೇಕು’ ಎಂದು ಮನವಿ ಮಾಡಿದರು. ಎಲ್ಲರೂ ಸರ್ಕಾರದ ಆದೇಶ ಗೌರವಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT