<p><strong>ಬೀದರ್:</strong> ರಾಜ್ಯ ಸರ್ಕಾರ ದಿಢೀರ್ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದ ಕಾರಣ ಹೋಟೆಲ್ ಹಾಗೂ ಬಟ್ಟೆ ಅಂಗಡಿ ಮಾಲೀಕರು ತೊಂದರೆಗೆ ಒಳಗಾದರು. ಅನೇಕ ವ್ಯಾಪಾರಿಗಳು ನಷ್ಟ ಅನುಭವಿಸಿದರು.</p>.<p>ವಾರಾಂತ್ಯ ಕರ್ಫ್ಯೂ ಕಾರಣ ಜನ ಮನೆಗಳಿಂದ ಹೊರ ಬರಲಿಲ್ಲ. ಇಡ್ಲಿ, ದೋಸೆಗೆ ಹಿಟ್ಟು ಸಿದ್ಧ ಮಾಡಿಕೊಂಡಿದ್ದ ಅನೇಕ ಹೋಟೆಲ್ಗಳು ನಷ್ಟ ಅನುಭವಿಸಿದವು. ಅನೇಕ ಹೋಟೆಲ್ಗಳಲ್ಲಿ ಜನ ಅಂತರ ಕಾಯ್ದುಕೊಳ್ಳದೆ ಕುಳಿತು ಊಟ, ಉಪಾಹಾರ ಸೇವಿಸಿದರು.</p>.<p>‘ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಸಬಹುದಿತ್ತು. ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿದರೆ ಸಾಕಿತ್ತು. ಕೋವಿಡ್ ಪ್ರಮಾಣ ಕಡಿಮೆಯಾಗಿದೆ. ವಾರಾಂತ್ಯ ಕರ್ಫ್ಯೂ ಅಗತ್ಯವಿರಲಿಲ್ಲ’ ಎಂದು ಸಾಯಿ ಟಿಫನ್ ಸೆಂಟರ್ ಮಾಲೀಕ್ ಕಿರಣ ಪೇಣೆ ಹೇಳಿದರು.</p>.<p>‘ಲಾಕ್ಡೌನ್ನಿಂದಾಗಿ ಬಹಳ ಕಷ್ಟ ಅನುಭವಿಸಿದ್ದೇವೆ. ಪಂಚಮಿ ಹಬ್ಬ ಒಂದು ದಿನ ಬಾಕಿ ಇರುವಾಗಲೇ ದಿಢೀರ್ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದ ಕಾರಣ ಗ್ರಾಹಕರು ಬಟ್ಟೆ ಖರೀದಿಗೆ ಬಂದಿಲ್ಲ. ನಷ್ಟ ಅನುಭವಿಸಬೇಕಾಗಿ ಬಂದಿದೆ’ ಎಂದು ಬಟ್ಟೆ ವ್ಯಾಪಾರಿ ಮಡಿವಾಳಪ್ಪ ಅಳಲು ತೋಡಿಕೊಂಡರು.</p>.<p>ಮಾರುಕಟ್ಟೆಗೆ ತರಕಾರಿ ತಂದಿದ್ದ ರೈತರು ಸಹ ತೊಂದರೆ ಅನುಭವಿಸಿದರು. ನಿರೀಕ್ಷೆಯಷ್ಟು ಜನ ಖರೀದಿಗೆ ಬಾರದ ಕಾರಣ ತರಕಾರಿ ಮರಳಿ ಮನೆಗೆ ಒಯ್ಯಬೇಕಾಗಿದೆ ಎಂದು ಚಿಟ್ಟಾದ ರೈತ ನಾಗೇಶ ಹೇಳಿದರು.</p>.<p>ಮಧ್ಯಾಹ್ನ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರೂ ಜನರ ಓಡಾಟ ನಿಂತಿರಲಿಲ್ಲ. ವಾಹನಗಳ ಸಂಚಾರ ಮುಂದುವರಿದಿತ್ತು. ಜನ ಮಾಸ್ಕ್ ಸಹ ಧರಿಸಿರಲಿಲ್ಲ. ಬೆಳಿಗ್ಗೆ ಮಾರುಕಟ್ಟೆಗೆ ಬಂದಿದ್ದ ಯಾರೊಬ್ಬರೂ ಮಾಸ್ಕ್ ಹಾಕಿಕೊಂಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ರಾಜ್ಯ ಸರ್ಕಾರ ದಿಢೀರ್ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದ ಕಾರಣ ಹೋಟೆಲ್ ಹಾಗೂ ಬಟ್ಟೆ ಅಂಗಡಿ ಮಾಲೀಕರು ತೊಂದರೆಗೆ ಒಳಗಾದರು. ಅನೇಕ ವ್ಯಾಪಾರಿಗಳು ನಷ್ಟ ಅನುಭವಿಸಿದರು.</p>.<p>ವಾರಾಂತ್ಯ ಕರ್ಫ್ಯೂ ಕಾರಣ ಜನ ಮನೆಗಳಿಂದ ಹೊರ ಬರಲಿಲ್ಲ. ಇಡ್ಲಿ, ದೋಸೆಗೆ ಹಿಟ್ಟು ಸಿದ್ಧ ಮಾಡಿಕೊಂಡಿದ್ದ ಅನೇಕ ಹೋಟೆಲ್ಗಳು ನಷ್ಟ ಅನುಭವಿಸಿದವು. ಅನೇಕ ಹೋಟೆಲ್ಗಳಲ್ಲಿ ಜನ ಅಂತರ ಕಾಯ್ದುಕೊಳ್ಳದೆ ಕುಳಿತು ಊಟ, ಉಪಾಹಾರ ಸೇವಿಸಿದರು.</p>.<p>‘ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಸಬಹುದಿತ್ತು. ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿದರೆ ಸಾಕಿತ್ತು. ಕೋವಿಡ್ ಪ್ರಮಾಣ ಕಡಿಮೆಯಾಗಿದೆ. ವಾರಾಂತ್ಯ ಕರ್ಫ್ಯೂ ಅಗತ್ಯವಿರಲಿಲ್ಲ’ ಎಂದು ಸಾಯಿ ಟಿಫನ್ ಸೆಂಟರ್ ಮಾಲೀಕ್ ಕಿರಣ ಪೇಣೆ ಹೇಳಿದರು.</p>.<p>‘ಲಾಕ್ಡೌನ್ನಿಂದಾಗಿ ಬಹಳ ಕಷ್ಟ ಅನುಭವಿಸಿದ್ದೇವೆ. ಪಂಚಮಿ ಹಬ್ಬ ಒಂದು ದಿನ ಬಾಕಿ ಇರುವಾಗಲೇ ದಿಢೀರ್ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದ ಕಾರಣ ಗ್ರಾಹಕರು ಬಟ್ಟೆ ಖರೀದಿಗೆ ಬಂದಿಲ್ಲ. ನಷ್ಟ ಅನುಭವಿಸಬೇಕಾಗಿ ಬಂದಿದೆ’ ಎಂದು ಬಟ್ಟೆ ವ್ಯಾಪಾರಿ ಮಡಿವಾಳಪ್ಪ ಅಳಲು ತೋಡಿಕೊಂಡರು.</p>.<p>ಮಾರುಕಟ್ಟೆಗೆ ತರಕಾರಿ ತಂದಿದ್ದ ರೈತರು ಸಹ ತೊಂದರೆ ಅನುಭವಿಸಿದರು. ನಿರೀಕ್ಷೆಯಷ್ಟು ಜನ ಖರೀದಿಗೆ ಬಾರದ ಕಾರಣ ತರಕಾರಿ ಮರಳಿ ಮನೆಗೆ ಒಯ್ಯಬೇಕಾಗಿದೆ ಎಂದು ಚಿಟ್ಟಾದ ರೈತ ನಾಗೇಶ ಹೇಳಿದರು.</p>.<p>ಮಧ್ಯಾಹ್ನ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರೂ ಜನರ ಓಡಾಟ ನಿಂತಿರಲಿಲ್ಲ. ವಾಹನಗಳ ಸಂಚಾರ ಮುಂದುವರಿದಿತ್ತು. ಜನ ಮಾಸ್ಕ್ ಸಹ ಧರಿಸಿರಲಿಲ್ಲ. ಬೆಳಿಗ್ಗೆ ಮಾರುಕಟ್ಟೆಗೆ ಬಂದಿದ್ದ ಯಾರೊಬ್ಬರೂ ಮಾಸ್ಕ್ ಹಾಕಿಕೊಂಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>