<p><strong>ಬೀದರ್</strong>: ‘ಬೀದರ್ ಉತ್ಸವದಲ್ಲಿ ಪಾಲ್ಗೊಳ್ಳಲು ಸೋಮವಾರ ನಗರಕ್ಕೆ ಆಗಮಿಸಿದ ಕನ್ನಡದ ಖ್ಯಾತ ನಟ, ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.</p>.<p>ಶಿವರಾಜಕುಮಾರ ಅವರು ಬೆಳಿಗ್ಗೆ ಡಾ.ಅಂಬೇಡ್ಕರ್ ವೃತ್ತಕ್ಕೆ ಆಗಮಿಸುತ್ತಿದ್ದಂತೆಯೇ ಅಭಿಮಾನಿಗಳು ಹೂಮಾಲೆ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಶಿವರಾಜಕುಮಾರ ಅವರು ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ರೋಡ್ ಶೋ ನಡೆಯಿತು.</p>.<p>ದಾರಿಯುದ್ದಕ್ಕೂ ಜನ ಶಿವರಾಜಕುಮಾರ ಪರ ಘೋಷಣೆ ಕೂಗಿ, ಕುಣಿದು ಕುಪ್ಪಳಿಸಿ ಅಭಿಮಾನ ಮೆರೆದರು. ಕನ್ನಡಪರ ಸಂಘಟನೆಗಳು ಬೈಕ್ ರ್ಯಾಲಿ ಮೂಲಕ ನೆಚ್ಚಿನ ನಟನಿಗೆ ಸ್ವಾಗತ ಕೋರಿದವು.</p>.<p>ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ, ಮಾಜಿ ಶಾಸಕ ಅಶೋಕ ಖೇಣಿ ಸೇರಿದಂತೆ ಅನೇಕ ಮುಖಂಡರು, ಕನ್ನಡಾಭಿಮಾನಿಗಳು ರೋಡ್ ಶೋನಲ್ಲಿ ಪಾಲ್ಗೊಂಡು ಗಮನ ಸೆಳೆದರು.</p>.<p>ಶಿವರಾಜಕುಮಾರ ಅವರು ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಮಾಲತಿ ಖೇಣಿ ಅವರ ಸ್ಮರಣಾರ್ಥವಾಗಿ ಆಯೋಜಿಸಿರುವ ಕ್ರಿಕೆಟ್ ಟೂರ್ನಮೆಂಟ್ಗೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಬೀದರ್ ಉತ್ಸವದಲ್ಲಿ ಪಾಲ್ಗೊಳ್ಳಲು ಸೋಮವಾರ ನಗರಕ್ಕೆ ಆಗಮಿಸಿದ ಕನ್ನಡದ ಖ್ಯಾತ ನಟ, ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.</p>.<p>ಶಿವರಾಜಕುಮಾರ ಅವರು ಬೆಳಿಗ್ಗೆ ಡಾ.ಅಂಬೇಡ್ಕರ್ ವೃತ್ತಕ್ಕೆ ಆಗಮಿಸುತ್ತಿದ್ದಂತೆಯೇ ಅಭಿಮಾನಿಗಳು ಹೂಮಾಲೆ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಶಿವರಾಜಕುಮಾರ ಅವರು ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ರೋಡ್ ಶೋ ನಡೆಯಿತು.</p>.<p>ದಾರಿಯುದ್ದಕ್ಕೂ ಜನ ಶಿವರಾಜಕುಮಾರ ಪರ ಘೋಷಣೆ ಕೂಗಿ, ಕುಣಿದು ಕುಪ್ಪಳಿಸಿ ಅಭಿಮಾನ ಮೆರೆದರು. ಕನ್ನಡಪರ ಸಂಘಟನೆಗಳು ಬೈಕ್ ರ್ಯಾಲಿ ಮೂಲಕ ನೆಚ್ಚಿನ ನಟನಿಗೆ ಸ್ವಾಗತ ಕೋರಿದವು.</p>.<p>ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ, ಮಾಜಿ ಶಾಸಕ ಅಶೋಕ ಖೇಣಿ ಸೇರಿದಂತೆ ಅನೇಕ ಮುಖಂಡರು, ಕನ್ನಡಾಭಿಮಾನಿಗಳು ರೋಡ್ ಶೋನಲ್ಲಿ ಪಾಲ್ಗೊಂಡು ಗಮನ ಸೆಳೆದರು.</p>.<p>ಶಿವರಾಜಕುಮಾರ ಅವರು ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಮಾಲತಿ ಖೇಣಿ ಅವರ ಸ್ಮರಣಾರ್ಥವಾಗಿ ಆಯೋಜಿಸಿರುವ ಕ್ರಿಕೆಟ್ ಟೂರ್ನಮೆಂಟ್ಗೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>