<p><strong>ಔರಾದ್</strong>: ‘ರೈತರು ಹಾಗೂ ಜನಸಾಮಾನ್ಯರು ತಮ್ಮ ಮನೆಯಲ್ಲಿ ಗೋವು ಸಾಕಿದರೆ ತುಂಬಾ ಅನುಕೂಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.</p>.<p>ತಾಲ್ಲೂಕಿನ ಬೋಂತಿಯಲ್ಲಿ ತಮ್ಮ ಜನ್ಮದಿನದ ಅಂಗವಾಗಿ ಗೋಪೂಜೆ ನೆರವೇರಿಸಿ, ಅವರು ಮಾತನಾಡಿದರು.</p>.<p>‘ಪ್ರಾಚೀನ ಕಾಲದಿಂದಲೂ ನಮ್ಮ ದೇಶದಲ್ಲಿ ಗೋವಿಗೆ ಪೂಜ್ಯ ಸ್ಥಾನ ಇದೆ. ಇಂತಹ ಗೋವುಗಳ ಸೇವೆ ಮಾಡಲೆಂದು ನಾನು ಪಶು ಸಂಗೋಪನೆ ಇಲಾಖೆ ಬೇಡಿ ಪಡೆದಿದ್ದೇನೆ’ ಎಂದು ತಿಳಿಸಿದರು.</p>.<p>‘ರಾಜ್ಯದಲ್ಲಿ ಪಶು ಸಂಗೋಪನಾ ಇಲಾಖೆಗೆ ಕಾಯಕಲ್ಪ ನೀಡಲು ವಿಶೇಷ ಕಾಳಜಿ ವಹಿಸಲಾಗಿದೆ. ಗೋ ಸಂಪತ್ತು ವೃದ್ಧಿಗಾಗಿ ಬೇರೆಬೇರೆ ರಾಜ್ಯಕ್ಕೆ ಹೋಗಿ ತಿಳಿದುಕೊಂಡಿದ್ದೇನೆ. ಪಶು ಚಿಕಿತ್ಸೆಗೆ 24 ಗಂಟೆಗಳ ಸಹಾಯವಾಣಿ ಕೇಂದ್ರ ತೆರೆದಿದ್ದು ದೇಶದಲ್ಲೇ ಮಾದರಿ’ ಎಂದು ಹೇಳಿದರು.</p>.<p>‘ರೈತರ ಬೇಡಿಕೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ. ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈಗಾಗಲೇ ಕಾರ್ಖಾನೆಯವರು ಒಪ್ಪಿಕೊಂಡಂತೆ ಪ್ರತಿ ಟನ್ ಕಬ್ಬಿಗೆ ₹ 2,400 ಕೊಡಬೇಕು. ಈ ವಿಷಯದಲ್ಲಿ ಮಾತು ತಪ್ಪಲು ಅವಕಾಶ ಕೊಡುವುದಿಲ್ಲ’ ಎಂದು ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎಂದು ಜನ ಮೈಮರೆಯಬಾರದು. ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು. ಕೋವಿಡ್ ಲಸಿಕೆ ಪಡೆಯುವುದು ಅತ್ಯಂತ ಸುರಕ್ಷಿತ. ಈ ಕಾರಣ ಇಂದು ಬೋಂತಿಯಲ್ಲೇ ಜನರಿಗೆ ಲಸಿಕೆ ಕೊಡುವ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಇದೇ ವೇಳೆ ಸಚಿವರು ಸಸಿ ನೆಡುವ ಅಭಿಯಾನಕ್ಕೂ ಚಾಲನೆ ನೀಡಿದರು.</p>.<p>ಮಾಜಿ ಶಾಸಕ ಪ್ರಕಾಶ ಖಂಡ್ರೆ, ಜಿಲ್ಲಾ ಪಂಚಾಯಿತಿ ಸದಸ್ಯ ಮಾರುತಿ<br />ಚವಾಣ್, ಧುರೀಣ ಬಂಡೆಪ್ಪ ಕಂಟೆ, ಜಗದೀಶ್ ಖೂಬಾ, ವಸಂತ ಬಿರಾದಾರ, ಶರಣಪ್ಪ ಪಂಚಾಕ್ಷರಿ, ಸುರೇಶ ಭೋಸ್ಲೆ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಿವಾಸ ಖೂಬಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ<br />ಡಾ. ವಿ.ಜಿ. ರೆಡ್ಡಿ, ಡಾ. ಮಹೇಶ ಬಿರಾದಾರ, ಡಾ.ಶರಣಯ್ಯ ಸ್ವಾಮಿ, ಯುವ ಧುರೀಣ ಸಚಿನ್ ರಾಠೋಡ್, ಜೈಪಾಲ್ ರಾಠೋಡ್, ಮಹಮ್ಮದ್ ನಯೀಮ್ ಬೆಳಕುಣಿ, ಡಾ.ಕಲ್ಲಪ್ಪ ಉಪ್ಪೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ‘ರೈತರು ಹಾಗೂ ಜನಸಾಮಾನ್ಯರು ತಮ್ಮ ಮನೆಯಲ್ಲಿ ಗೋವು ಸಾಕಿದರೆ ತುಂಬಾ ಅನುಕೂಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.</p>.<p>ತಾಲ್ಲೂಕಿನ ಬೋಂತಿಯಲ್ಲಿ ತಮ್ಮ ಜನ್ಮದಿನದ ಅಂಗವಾಗಿ ಗೋಪೂಜೆ ನೆರವೇರಿಸಿ, ಅವರು ಮಾತನಾಡಿದರು.</p>.<p>‘ಪ್ರಾಚೀನ ಕಾಲದಿಂದಲೂ ನಮ್ಮ ದೇಶದಲ್ಲಿ ಗೋವಿಗೆ ಪೂಜ್ಯ ಸ್ಥಾನ ಇದೆ. ಇಂತಹ ಗೋವುಗಳ ಸೇವೆ ಮಾಡಲೆಂದು ನಾನು ಪಶು ಸಂಗೋಪನೆ ಇಲಾಖೆ ಬೇಡಿ ಪಡೆದಿದ್ದೇನೆ’ ಎಂದು ತಿಳಿಸಿದರು.</p>.<p>‘ರಾಜ್ಯದಲ್ಲಿ ಪಶು ಸಂಗೋಪನಾ ಇಲಾಖೆಗೆ ಕಾಯಕಲ್ಪ ನೀಡಲು ವಿಶೇಷ ಕಾಳಜಿ ವಹಿಸಲಾಗಿದೆ. ಗೋ ಸಂಪತ್ತು ವೃದ್ಧಿಗಾಗಿ ಬೇರೆಬೇರೆ ರಾಜ್ಯಕ್ಕೆ ಹೋಗಿ ತಿಳಿದುಕೊಂಡಿದ್ದೇನೆ. ಪಶು ಚಿಕಿತ್ಸೆಗೆ 24 ಗಂಟೆಗಳ ಸಹಾಯವಾಣಿ ಕೇಂದ್ರ ತೆರೆದಿದ್ದು ದೇಶದಲ್ಲೇ ಮಾದರಿ’ ಎಂದು ಹೇಳಿದರು.</p>.<p>‘ರೈತರ ಬೇಡಿಕೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ. ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈಗಾಗಲೇ ಕಾರ್ಖಾನೆಯವರು ಒಪ್ಪಿಕೊಂಡಂತೆ ಪ್ರತಿ ಟನ್ ಕಬ್ಬಿಗೆ ₹ 2,400 ಕೊಡಬೇಕು. ಈ ವಿಷಯದಲ್ಲಿ ಮಾತು ತಪ್ಪಲು ಅವಕಾಶ ಕೊಡುವುದಿಲ್ಲ’ ಎಂದು ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎಂದು ಜನ ಮೈಮರೆಯಬಾರದು. ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು. ಕೋವಿಡ್ ಲಸಿಕೆ ಪಡೆಯುವುದು ಅತ್ಯಂತ ಸುರಕ್ಷಿತ. ಈ ಕಾರಣ ಇಂದು ಬೋಂತಿಯಲ್ಲೇ ಜನರಿಗೆ ಲಸಿಕೆ ಕೊಡುವ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಇದೇ ವೇಳೆ ಸಚಿವರು ಸಸಿ ನೆಡುವ ಅಭಿಯಾನಕ್ಕೂ ಚಾಲನೆ ನೀಡಿದರು.</p>.<p>ಮಾಜಿ ಶಾಸಕ ಪ್ರಕಾಶ ಖಂಡ್ರೆ, ಜಿಲ್ಲಾ ಪಂಚಾಯಿತಿ ಸದಸ್ಯ ಮಾರುತಿ<br />ಚವಾಣ್, ಧುರೀಣ ಬಂಡೆಪ್ಪ ಕಂಟೆ, ಜಗದೀಶ್ ಖೂಬಾ, ವಸಂತ ಬಿರಾದಾರ, ಶರಣಪ್ಪ ಪಂಚಾಕ್ಷರಿ, ಸುರೇಶ ಭೋಸ್ಲೆ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಿವಾಸ ಖೂಬಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ<br />ಡಾ. ವಿ.ಜಿ. ರೆಡ್ಡಿ, ಡಾ. ಮಹೇಶ ಬಿರಾದಾರ, ಡಾ.ಶರಣಯ್ಯ ಸ್ವಾಮಿ, ಯುವ ಧುರೀಣ ಸಚಿನ್ ರಾಠೋಡ್, ಜೈಪಾಲ್ ರಾಠೋಡ್, ಮಹಮ್ಮದ್ ನಯೀಮ್ ಬೆಳಕುಣಿ, ಡಾ.ಕಲ್ಲಪ್ಪ ಉಪ್ಪೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>