<p><strong>ಬೀದರ್:</strong> ಕಾಲಕಾಲಕ್ಕೆ ವೃದ್ಧಾಶ್ರಮದಲ್ಲಿರುವ ವೃದ್ಧರ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ ಸೂಚಿಸಿದರು.</p>.<p>ನಗರದ ಚಿದ್ರಿ ಹತ್ತಿರದ ಡಾ. ಬಿ.ಆರ್. ಅಂಬೇಡ್ಕರ್ ಕಲ್ಚರಲ್ ಆ್ಯಂಡ್ ವೆಲ್ಫೇರ್ ಸೊಸೈಟಿ ಸಂಚಾಲಿತ ಜ್ಯೋತಿಬಾ ಫುಲೆ ವೃದ್ಧಾಶ್ರಮ ಹಾಗೂ ಮಂಗಲಪೇಟ್ ಹತ್ತಿರದ ಮದರ್ ತೆರೆಸಾ ವೃದ್ಧಾಶ್ರಮಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಅವರು ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದರು.</p>.<p>ಎಲ್ಲಿಂದ ಬಂದಿದ್ದೀರಿ, ಆರೋಗ್ಯ ಹೇಗಿದೆ, ಮಾಸಾಶನ ಸಿಗುತ್ತಾ ಎಂದು ವೃದ್ಧರನ್ನು ವಿಚಾರಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರಿ ಬಾಲಕರ ಬಾಲ ಮಂದಿರಕ್ಕೆ ಭೇಟಿ ಕೊಟ್ಟು ಮಕ್ಕಳ ವಸತಿ ಕೋಣೆ ಹಾಗೂ ಅಡುಗೆ ಕೋಣೆಗಳನ್ನು ವೀಕ್ಷಿಸಿದರು. ಮಕ್ಕಳ ಊಟಕ್ಕೆ ಬಳಸುವ ಆಹಾರಧಾನ್ಯಗಳನ್ನು ಪರಿಶೀಲಿಸಿದರು.</p>.<p>ಕೆಲ ಕೋಣೆಗಳಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದಿರುವುದು, ಸಂಗೀತ ಸಲಕರಣೆಗಳು ದೂಳು ತಿನ್ನುತ್ತಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಾರ್ಯವೈಖರಿ ಸರಿಪಡಿಸಿಕೊಳ್ಳದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಹಾಳಾದ ಬಾಲ ಮಂದಿರ ಮೇಲ್ಛಾವಣಿ ಹಾಗೂ ಗೋಡೆಗಳನ್ನು ದುರಸ್ತಿಪಡಿಸಬೇಕು ಎಂದು ಸೂಚಿಸಿದರು.</p>.<p>ಬಾಲಕಿಯರ ಬಾಲ ಮಂದಿರಕ್ಕೂ ಭೇಟಿ ನೀಡಿ ವ್ಯವಸ್ಥೆ ವೀಕ್ಷಣೆ ಮಾಡಿದರು. ದೂರವಾಣಿಯಲ್ಲಿ ಪೌರಾಯುಕ್ತರನ್ನು ಸಂಪರ್ಕಿಸಿ, ಬಾಲಕಿಯರ ಬಾಲ ಮಂದಿರ ಆವರಣದಲ್ಲಿನ ಕಸ ವಿಲೇವಾರಿ ಮಾಡಬೇಕು. ತೆರೆದ ಬಾವಿಯನ್ನು ಶುಚಿಗೊಳಿಸಿ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಬಸವನಗರದ ಜಂಗಲ್ಕೋಯಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವೀಕ್ಷಣಾಲಯಕ್ಕೂ ಭೇಟಿ ನೀಡಿ ಆಪ್ತ ಸಮಾಲೋಚಕರು ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸೂರ್ಯಕಾಂತ ಬಿರಾದಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಎನ್. ಜಾಧವ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ, ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪ್ರತಾಪೂರೆ, ಶಂಭುಲಿಂಗ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕಾಲಕಾಲಕ್ಕೆ ವೃದ್ಧಾಶ್ರಮದಲ್ಲಿರುವ ವೃದ್ಧರ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ ಸೂಚಿಸಿದರು.</p>.<p>ನಗರದ ಚಿದ್ರಿ ಹತ್ತಿರದ ಡಾ. ಬಿ.ಆರ್. ಅಂಬೇಡ್ಕರ್ ಕಲ್ಚರಲ್ ಆ್ಯಂಡ್ ವೆಲ್ಫೇರ್ ಸೊಸೈಟಿ ಸಂಚಾಲಿತ ಜ್ಯೋತಿಬಾ ಫುಲೆ ವೃದ್ಧಾಶ್ರಮ ಹಾಗೂ ಮಂಗಲಪೇಟ್ ಹತ್ತಿರದ ಮದರ್ ತೆರೆಸಾ ವೃದ್ಧಾಶ್ರಮಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಅವರು ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದರು.</p>.<p>ಎಲ್ಲಿಂದ ಬಂದಿದ್ದೀರಿ, ಆರೋಗ್ಯ ಹೇಗಿದೆ, ಮಾಸಾಶನ ಸಿಗುತ್ತಾ ಎಂದು ವೃದ್ಧರನ್ನು ವಿಚಾರಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರಿ ಬಾಲಕರ ಬಾಲ ಮಂದಿರಕ್ಕೆ ಭೇಟಿ ಕೊಟ್ಟು ಮಕ್ಕಳ ವಸತಿ ಕೋಣೆ ಹಾಗೂ ಅಡುಗೆ ಕೋಣೆಗಳನ್ನು ವೀಕ್ಷಿಸಿದರು. ಮಕ್ಕಳ ಊಟಕ್ಕೆ ಬಳಸುವ ಆಹಾರಧಾನ್ಯಗಳನ್ನು ಪರಿಶೀಲಿಸಿದರು.</p>.<p>ಕೆಲ ಕೋಣೆಗಳಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದಿರುವುದು, ಸಂಗೀತ ಸಲಕರಣೆಗಳು ದೂಳು ತಿನ್ನುತ್ತಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಾರ್ಯವೈಖರಿ ಸರಿಪಡಿಸಿಕೊಳ್ಳದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಹಾಳಾದ ಬಾಲ ಮಂದಿರ ಮೇಲ್ಛಾವಣಿ ಹಾಗೂ ಗೋಡೆಗಳನ್ನು ದುರಸ್ತಿಪಡಿಸಬೇಕು ಎಂದು ಸೂಚಿಸಿದರು.</p>.<p>ಬಾಲಕಿಯರ ಬಾಲ ಮಂದಿರಕ್ಕೂ ಭೇಟಿ ನೀಡಿ ವ್ಯವಸ್ಥೆ ವೀಕ್ಷಣೆ ಮಾಡಿದರು. ದೂರವಾಣಿಯಲ್ಲಿ ಪೌರಾಯುಕ್ತರನ್ನು ಸಂಪರ್ಕಿಸಿ, ಬಾಲಕಿಯರ ಬಾಲ ಮಂದಿರ ಆವರಣದಲ್ಲಿನ ಕಸ ವಿಲೇವಾರಿ ಮಾಡಬೇಕು. ತೆರೆದ ಬಾವಿಯನ್ನು ಶುಚಿಗೊಳಿಸಿ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಬಸವನಗರದ ಜಂಗಲ್ಕೋಯಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವೀಕ್ಷಣಾಲಯಕ್ಕೂ ಭೇಟಿ ನೀಡಿ ಆಪ್ತ ಸಮಾಲೋಚಕರು ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸೂರ್ಯಕಾಂತ ಬಿರಾದಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಎನ್. ಜಾಧವ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ, ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪ್ರತಾಪೂರೆ, ಶಂಭುಲಿಂಗ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>