‘ಬಿಜೆಪಿ ಸರ್ಕಾರ ಪಾರದರ್ಶಕ ಆಡಳಿತ ಕೊಡುತ್ತಿದೆ. ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದವರನ್ನು ಈಗಾಗಲೇ ಬಂಧಿಸಲಾಗಿದೆ. ಪಾಕಿಸ್ತಾನಕ್ಕೆ ಜೈ ಎನ್ನುವುದರಿಂದ ನಿಮ್ಮ ವೋಟ್ ಬ್ಯಾಂಕ್ ಬೆಳೆಯುತ್ತದೆಯೇ’ ಎಂದು ಪ್ರಶ್ನಿಸಿದ ಅವರು, ‘ಪಾಕಿಸ್ತಾನಕ್ಕೆ ಜೈ ಎಂದರೆ ಸುಮ್ಮನೆ ಕುಳಿತುಕೊಳ್ಳಲಾಗದು. ಕಾಂಗ್ರೆಸ್ನವರಿಗೆ ಭಾರತಕ್ಕಿಂತ ಪಾಕಿಸ್ತಾನದ ಮೇಲೆಯೇ ಹೆಚ್ಚು ಪ್ರೀತಿ ಇದೆ’ ಎಂದರು.
‘ಬೀದರ್ನ ಶಾಹೀನ್ ಶಿಕ್ಷಣ ಸಂಸ್ಥೆಯ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಷ್ಟೇಕೆ ಪ್ರೀತಿ?. ದೇಶದ್ರೋಹಿಗಳು ಯಾರೇ ಇರಲಿ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಸಿದ್ದರಾಮಯ್ಯ ಅವರಿಗೆ ಅಧಿವೇಶನ ಬಹಿಷ್ಕರಿಸುವುದು ಶೋಭೆ ತರುವುದಿಲ್ಲ’ ಎಂದು ಹೇಳಿದರು.