<p><strong>ನಾವದಗಿ (ಖಟಕಚಿಂಚೋಳಿ): </strong>ಭಾಲ್ಕಿ ತಾಲ್ಲೂಕಿನ ನಾವದಗಿ ಗ್ರಾಮಕ್ಕೆ ಸೋಮವಾರ ತಾಲ್ಲೂಕು ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಆರೋಗ್ಯ ಇಲಾಖೆ ಉಪಕೇಂದ್ರದ ಮಾಹಿತಿ ಪಡೆದುಕೊಂಡಿತು.</p>.<p>‘ಪಾಳುಬಿದ್ದ ಆರೋಗ್ಯ ಉಪಕೇಂದ್ರ, ಅಂಗನವಾಡಿ, ಗುಡಿಯಲ್ಲಿ ಜನರಿಗೆ ಲಸಿಕೆ’ ಶೀರ್ಷಿಕೆ ಅಡಿಯಲ್ಲಿ ಮೇ 17ರ ಸಂಚಿಕೆಯಲ್ಲಿ ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.</p>.<p>ವರದಿಗೆ ಸ್ಪಂದಿಸಿದ ತಾಲ್ಲೂಕು ಆರೋಗ್ಯ ಅಧಿಕಾರಿಗಳ ತಂಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ಭಂಗೂರೆ ಅವರಿಂದ ಮಾಹಿತಿ ಪಡೆಯಿತು.</p>.<p>ತಾಲ್ಲೂಕು ಆರೋಗ್ಯ ಅಧಿಕಾರಿ ಜ್ಞಾನೇಶ್ವರ ನಿರಗುಡೆ ಮಾತನಾಡಿ, ‘ಮುಂದಿನ ಎರಡು– ಮೂರು ದಿನಗಳಲ್ಲಿ ಉಪಕೇಂದ್ರಕ್ಕೆ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಒದಗಿಸಬೇಕು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹೇಳಿದರು.</p>.<p>‘ಲಸಿಕೆ ಬಗ್ಗೆ ಗ್ರಾಮದ ಜನರು ಭಯಪಡುವ ಅವಶ್ಯಕತೆ ಇಲ್ಲ. ಲಸಿಕೆ ಪಡೆಯುವುದರಿಂದ ಆರೋಗ್ಯದ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಬೀರುವುದಿಲ್ಲ’ ಎಂದು ತಿಳಿಸಿದರು.</p>.<p>‘ಮೇ 18ರಂದು 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಹಾಕಲಾಗುವುದು. ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ, ಸಹಾಯಕ ಕೃಷಿ ನಿರ್ದೇಶಕ ಆನಂದ ಬೇಲೂರೆ, ವೈದ್ಯಾಧಿಕಾರಿ ಡಾ.ಪ್ರವೀಣ, ಪಂಚಾಯಿತಿ ಸದಸ್ಯ ರಾಜಶೇಖರ ಬಿರಾದಾರ, ಕಿರಿಯ ಆರೋಗ್ಯ ಸಹಾಯಕಿ ಪ್ರತಿಭಾ, ಪ್ರಮುಖರಾದ ನಾಗನಾಥ ಬಿರಾದಾರ, ಬಸವರಾಜ ಬೇಲೂರೆ, ಪ್ರಭುದೇವ ಸ್ವಾಮಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾವದಗಿ (ಖಟಕಚಿಂಚೋಳಿ): </strong>ಭಾಲ್ಕಿ ತಾಲ್ಲೂಕಿನ ನಾವದಗಿ ಗ್ರಾಮಕ್ಕೆ ಸೋಮವಾರ ತಾಲ್ಲೂಕು ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಆರೋಗ್ಯ ಇಲಾಖೆ ಉಪಕೇಂದ್ರದ ಮಾಹಿತಿ ಪಡೆದುಕೊಂಡಿತು.</p>.<p>‘ಪಾಳುಬಿದ್ದ ಆರೋಗ್ಯ ಉಪಕೇಂದ್ರ, ಅಂಗನವಾಡಿ, ಗುಡಿಯಲ್ಲಿ ಜನರಿಗೆ ಲಸಿಕೆ’ ಶೀರ್ಷಿಕೆ ಅಡಿಯಲ್ಲಿ ಮೇ 17ರ ಸಂಚಿಕೆಯಲ್ಲಿ ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.</p>.<p>ವರದಿಗೆ ಸ್ಪಂದಿಸಿದ ತಾಲ್ಲೂಕು ಆರೋಗ್ಯ ಅಧಿಕಾರಿಗಳ ತಂಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ಭಂಗೂರೆ ಅವರಿಂದ ಮಾಹಿತಿ ಪಡೆಯಿತು.</p>.<p>ತಾಲ್ಲೂಕು ಆರೋಗ್ಯ ಅಧಿಕಾರಿ ಜ್ಞಾನೇಶ್ವರ ನಿರಗುಡೆ ಮಾತನಾಡಿ, ‘ಮುಂದಿನ ಎರಡು– ಮೂರು ದಿನಗಳಲ್ಲಿ ಉಪಕೇಂದ್ರಕ್ಕೆ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಒದಗಿಸಬೇಕು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹೇಳಿದರು.</p>.<p>‘ಲಸಿಕೆ ಬಗ್ಗೆ ಗ್ರಾಮದ ಜನರು ಭಯಪಡುವ ಅವಶ್ಯಕತೆ ಇಲ್ಲ. ಲಸಿಕೆ ಪಡೆಯುವುದರಿಂದ ಆರೋಗ್ಯದ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಬೀರುವುದಿಲ್ಲ’ ಎಂದು ತಿಳಿಸಿದರು.</p>.<p>‘ಮೇ 18ರಂದು 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಹಾಕಲಾಗುವುದು. ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ, ಸಹಾಯಕ ಕೃಷಿ ನಿರ್ದೇಶಕ ಆನಂದ ಬೇಲೂರೆ, ವೈದ್ಯಾಧಿಕಾರಿ ಡಾ.ಪ್ರವೀಣ, ಪಂಚಾಯಿತಿ ಸದಸ್ಯ ರಾಜಶೇಖರ ಬಿರಾದಾರ, ಕಿರಿಯ ಆರೋಗ್ಯ ಸಹಾಯಕಿ ಪ್ರತಿಭಾ, ಪ್ರಮುಖರಾದ ನಾಗನಾಥ ಬಿರಾದಾರ, ಬಸವರಾಜ ಬೇಲೂರೆ, ಪ್ರಭುದೇವ ಸ್ವಾಮಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>