<p><strong>ಔರಾದ್ (ಬೀದರ್ ಜಿಲ್ಲೆ)</strong>: ತಾಲ್ಲೂಕಿನ ವಿವಿಧೆಡೆ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಸಂತಪುರ, ವಡಗಾಂವ್, ಚಿಂತಾಕಿ ಹೋಬಳಿಯಲ್ಲಿ ಮಳೆಯ ತೀವ್ರತೆ ಜಾಸ್ತಿಯಾಗಿ ಮನೆಗಳಿಗೆ ನೀರು ನುಗ್ಗಿದೆ. ಬೋರ್ಗಿ ಗ್ರಾಮದ ಜಗದೇವಿ ಮಾದಪ್ಪ ಅವರ ಮನೆಯಲ್ಲಿ ನೀರು ಬಂದು ಕುಟುಂಬಸ್ಥರು ನಿರಾಶ್ರಿತರಾಗಿದ್ದಾರೆ. ಅವರನ್ನು ಪಕ್ಕದ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿದೆ.</p>.<p>ವಡಗಾಂವ್ ಕಂದಗೂಳ ನಡುವಿನ ಸೇತುವೆ ಮೇಲಿಂದ ನೀರು ಹರಿದು ಈ ಭಾಗದ ಪ್ರಯಾಣಿಕರು ಪರದಾಡಿದರು. ಸಂತಪುರ ವಡಗಾಂವ್ ನಡುವಿನ ನಾಗೂರ ಬಳಿಯ ಸೇತುವೆ ಮುಳಗಡೆಯಾಗಿ ಶನಿವಾರ ಬೆಳಿಗ್ಗೆ ತನಕ ಸಂಪರ್ಕ ಕಡಿತವಾಗಿತ್ತು.</p>.<p>ಸಂತಪುರ ಠಾಣಾಕುಶೂರ ನಡುವಿನ ನಾಗೂರ (ಎಂ) ಬಳಿಯ ಬದಲಿ ರಸ್ತೆ ಮಳೆಗೆ ಕಿತ್ತುಹೋಗಿ ಈ ಭಾಗದ ಸಂಚಾರ ಸ್ಥಗಿತವಾಗಿದೆ. ಅನೇಕ ಹೊಲಗಳಿಗೆ ನೀರು ನುಗ್ಗಿ ವಾರದ ಹಿಂದೆ ಬಿತ್ತನೆ ಮಾಡಿದ ಸೋಯಾ, ಉದ್ದು. ಹೆಸರು, ಜೋಳ ನೀರು ಪಾಲಾಗಿದೆ.</p>.<p>ಕಳೆದ ಸಾಲಿನ ಅತಿವೃಷ್ಟಿಯಿಂದ ಇನ್ನೂ ಚೇತರಿಸಿಕೊಳ್ಳದ ರೈತರಿಗೆ ಈ ಮಳೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್ (ಬೀದರ್ ಜಿಲ್ಲೆ)</strong>: ತಾಲ್ಲೂಕಿನ ವಿವಿಧೆಡೆ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಸಂತಪುರ, ವಡಗಾಂವ್, ಚಿಂತಾಕಿ ಹೋಬಳಿಯಲ್ಲಿ ಮಳೆಯ ತೀವ್ರತೆ ಜಾಸ್ತಿಯಾಗಿ ಮನೆಗಳಿಗೆ ನೀರು ನುಗ್ಗಿದೆ. ಬೋರ್ಗಿ ಗ್ರಾಮದ ಜಗದೇವಿ ಮಾದಪ್ಪ ಅವರ ಮನೆಯಲ್ಲಿ ನೀರು ಬಂದು ಕುಟುಂಬಸ್ಥರು ನಿರಾಶ್ರಿತರಾಗಿದ್ದಾರೆ. ಅವರನ್ನು ಪಕ್ಕದ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿದೆ.</p>.<p>ವಡಗಾಂವ್ ಕಂದಗೂಳ ನಡುವಿನ ಸೇತುವೆ ಮೇಲಿಂದ ನೀರು ಹರಿದು ಈ ಭಾಗದ ಪ್ರಯಾಣಿಕರು ಪರದಾಡಿದರು. ಸಂತಪುರ ವಡಗಾಂವ್ ನಡುವಿನ ನಾಗೂರ ಬಳಿಯ ಸೇತುವೆ ಮುಳಗಡೆಯಾಗಿ ಶನಿವಾರ ಬೆಳಿಗ್ಗೆ ತನಕ ಸಂಪರ್ಕ ಕಡಿತವಾಗಿತ್ತು.</p>.<p>ಸಂತಪುರ ಠಾಣಾಕುಶೂರ ನಡುವಿನ ನಾಗೂರ (ಎಂ) ಬಳಿಯ ಬದಲಿ ರಸ್ತೆ ಮಳೆಗೆ ಕಿತ್ತುಹೋಗಿ ಈ ಭಾಗದ ಸಂಚಾರ ಸ್ಥಗಿತವಾಗಿದೆ. ಅನೇಕ ಹೊಲಗಳಿಗೆ ನೀರು ನುಗ್ಗಿ ವಾರದ ಹಿಂದೆ ಬಿತ್ತನೆ ಮಾಡಿದ ಸೋಯಾ, ಉದ್ದು. ಹೆಸರು, ಜೋಳ ನೀರು ಪಾಲಾಗಿದೆ.</p>.<p>ಕಳೆದ ಸಾಲಿನ ಅತಿವೃಷ್ಟಿಯಿಂದ ಇನ್ನೂ ಚೇತರಿಸಿಕೊಳ್ಳದ ರೈತರಿಗೆ ಈ ಮಳೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>