ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಹುಲಸೂರ | ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು

Published : 16 ಸೆಪ್ಟೆಂಬರ್ 2025, 5:52 IST
Last Updated : 16 ಸೆಪ್ಟೆಂಬರ್ 2025, 5:52 IST
ಫಾಲೋ ಮಾಡಿ
Comments
ಪಟ್ಟಣದ ಶಿವಾಜಿ ವೃತ್ತದಿಂದ ಜಾಮಿಯಾ ಮಸೀದಿವರೆಗೆ ಅವೈಜ್ಞಾನಿಕ ರೀತಿಯಲ್ಲಿ ಚರಂಡಿ ನಿರ್ಮಾಣ ಮಾಡಿದ ಕಾರಣ ಹೆಚ್ಚು ಮಳೆ ಬಂದಾಗಲೆಲ್ಲ ಈ ರೀತಿಯ ಸಮಸ್ಯೆ ಎದುರಾಗುತ್ತಿದೆ
ಗೋವಿಂದರಾವ ಸೋಮವಂಶಿ ತಾ.ಪಂ ಮಾಜಿ ಸದಸ್ಯ
ಒತ್ತುವರಿ ತೆರವು ಕಾರ್ಯಾಚರಣೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ ಸಮಸ್ಯೆ ಇರುವ ಕಡೆ ತಕ್ಷಣ ಪರಿಹರಿಸಲು ಸೂಚಿಸಿದ್ದೇನೆ
ಮಹಾದೇವ ಜಮ್ಮು ತಾ.ಪಂ ಇಒ
ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕೆಲವರು ಕಾನೂನು ಬಾಹಿರವಾಗಿ ಅನುಮತಿ ಪಡೆದು ಕಟ್ಟಡ ನಿರ್ಮಾಣ ಮಾಡಿಕೊಂಡು ತಡೆಗೋಡೆ ನಿರ್ಮಿಸಿದ ಕಾರಣ ಮಳೆ ನೀರು ಇತರೆ ಓಣಿಗಳ ಮನೆಗಳಿಗೆ ನುಗ್ಗಿದೆ. ಬೇಗ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಬೇಕು
ಧನಾಜಿ ಸೂರ್ಯವಂಶಿ ಗ್ರಾ.ಪಂ ಸದಸ್ಯ ಹುಲಸೂರ
ತುರ್ತು ಪರಿಹಾರ ಒದಗಿಸಿ:
ವಿಜಯಸಿಂಗ್ ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅವರ ಎದುರು ಸಂತ್ರಸ್ತರು ಅಳಲು ತೋಡಿಕೊಂಡರು. ಪಟ್ಟಣದಲ್ಲಿ ಒತ್ತುವರಿ ಹೆಚ್ಚಾಗಿದೆ. ಗುತ್ತಿಗೆದಾರರು ಅವೈಜ್ಞಾನಿಕ ರೀತಿಯಲ್ಲಿ ಚರಂಡಿಗಳನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿದರು. ಅದನ್ನು ಆಲಿಸಿದ ವಿಜಯಸಿಂಗ್ ಅವರು ಕೂಡಲೇ ಪಿಡಿಒ ಹಾಗೂ ಗುತ್ತಿಗೆದಾರರನ್ನು ತರಾಟೆ ತೆಗೆದುಕೊಂಡರು. ಕೂಡಲೇ ತುರ್ತು ಪರಿಹಾರ ಒದಗಿಸಿ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT