ಮಹಾರಾಷ್ಟ್ರದ ಧನೇಗಾಂವ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಹರಿ ಬಿಡಲಾಗಿದೆ. ನದಿ ಪಾತ್ರದ ಕಾಳಸರತೂಗಾಂವ, ವಾಡಿ, ಮಾಣಿಕೇಶ್ವರ, ಭಾಟಸಾಂಗವಿ, ಶಿವಣಿ, ಲಖನಗಾಂವ, ಸಾಯಗಾಂವ, ಸೋಮಪೂರ ಸೇರಿದಂತೆ ಇತರ ಗ್ರಾಮಗಳ ಜಮೀನುಗಳಿಗೆ ನದಿ ನೀರು ನುಗ್ಗಿದೆ. ಬೆಳೆಗಳು ನಾಶವಾಗಿವೆ. ಬೆಳೆಗಳು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋದರೂ ಅಧಿಕಾರಿಗಳು ರೈತರಿಗೆ ಪರಿಹಾರ ನೀಡುತ್ತಿಲ್ಲ ಎಂದು ರೈತರಾದ ನೀಲಕಂಠ ನಾಗಶಂಕರೆ, ಮಲ್ಲಿಕಾರ್ಜುನ ಬಿರಾದಾರ, ಸಂಗ್ರಾಮ ಪಾಟೀಲ, ಶಿವಕುಮಾರ ಪಾಟೀಲ ಅಲವತ್ತುಕೊಂಡರು.