ಬೀದರ್: ಜಿಲ್ಲೆಯ ಬಸವಕಲ್ಯಾಣ, ಹುಲಸೂರ, ಹುಮನಾಬಾದ್ ಹಾಗೂ ಭಾಲ್ಕಿ ತಾಲ್ಲೂಕುಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಭಾಲ್ಕಿ ತಾಲ್ಲೂಕಿನ ಖಟಕಚಿಂಚೋಳಿ ಗ್ರಾಮದಲ್ಲಿ ಸಿಡಿಲು ಬಡಿದು ಪಾರ್ವತಿ ನಂದಕುಮಾರ (40) ಮೃತಪಟ್ಟಿದ್ದಾರೆ.
‘ಮಂಗಳವಾರ ಹೊಲದಲ್ಲಿ ತೊಗರಿ ಕೊಯ್ಲು ಆರಿಸುತ್ತಿದ್ದಾಗ ಸಿಡಿಲು ಬಡಿದಿದೆ. ಖಟಕಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪಿಎಸ್ಐ ಶೇಖ್ ಷಾ ಪಟೇಲ್ ತಿಳಿಸಿದ್ದಾರೆ.
ಹುಮನಾಬಾದ್ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಗುಡುಗು, ಮಿಂಚು ಹಾಗೂ ಗಾಳಿಯ ಆರ್ಭಟ ಜೋರಾಯಿತು. 4 ಗಂಟೆಗೆ ಗುಡುಗು ಸಹಿತ 15 ನಿಮಿಷ ಮಳೆ ಸುರಿಯಿತು.