ಬಸವಕಲ್ಯಾಣ ತಾಲ್ಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಂಡೂರಿ ನಾಲಾ, ಬೆಣ್ಣೆತೊರೆ ನದಿ ತುಂಬಿ ಹರಿದು ಹೊಲಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಗೋರಟಾ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ನೀರು ನುಗ್ಗಿ ಮನೆಗಳಿಗೆ ಹಾನಿಯಾಗಿದೆ. ಬೀದರ್ ತಾಲ್ಲೂಕಿನ ಬಗದಲ್, ಕಾಡವಾಡ್, ಯದಲಾಪುರದಲ್ಲಿ ಭಾರಿ ಮಳೆಯಾಗಿ ಅಪಾರ ಬೆಳೆ ನಷ್ಟವಾಗಿದೆ.