ಹೋಬಳಿಯ ಹೊನ್ನಾಳಿ, ಕಟ್ಟಿ ತುಗಾಂವ್ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮುಂಗಾರು ಮಳೆ ಸರಿಯಾದ ಸಮಯಕ್ಕೆ ಸುರಿದಿದ್ದರಿಂದ ದುಬಾರಿ ಬೆಲೆಗೆ ಬೀಜ, ರಸಗೊಬ್ಬರ ಖರೀದಿಸಿ ಬಿತ್ತನೆ ಮಾಡಲಾಗಿದೆ. ಹೋಬಳಿಯಲ್ಲಿ ಹೆಸರು 9 ಸಾವಿರ ಹೆಕ್ಟೇರ್, ಉದ್ದು ಹಾಗೂ ಸೋಯಾ 8 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಿದೆ. ಸದ್ಯ ವಾಡಿಕೆಗಿಂತಲೂ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಬೆಳೆ ಹಾಳಾಗುವ ಆತಂಕದಲ್ಲಿ ರೈತರಿದ್ದಾರೆ.