ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಬ್ಬಾಳೆ ಹೇಳಿಕೆ ಹಾಸ್ಯಾಸ್ಪದ :ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಚನಶೆಟ್ಟಿ ಟೀಕೆ

Last Updated 6 ಜುಲೈ 2020, 13:38 IST
ಅಕ್ಷರ ಗಾತ್ರ

ಬೀದರ್‌: ಸಿರಿಗನ್ನಡ ಪುಸ್ತಕ ಮಳಿಗೆ ಸ್ಥಾಪನೆಗೆ ಸಂಬಂಧಿಸಿದಂತೆ ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಟೀಕಿಸಿದ್ದಾರೆ.

ಹಿರಿಯ ಕನ್ನಡ ಹೋರಾಟ ಪ್ರಭುರಾವ್ ಕಂಬಳಿವಾಲೆ ಹೆಸರಿನ ಬಸ್ ತಂಗುದಾಣ ಸ್ಥಳಾಂತರಿಸಿ ಅವರಿಗೆ ಅವಮಾನ ಮಾಡಿದ್ದಾರೆ. ಕಂಬಳಿವಾಲೆ ಸ್ಮಾರಕ ಭವನ ನಿರ್ಮಾಣಕ್ಕೆ ಮುಂದಾಗುವುದು ಬಿಟ್ಟು ಇರುವಂಥ ತಂಗುದಾಣವನ್ನೇ ತೆರವು ಗೊಳಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಮಾಡದ ಕೆಲಸ ನಾನು ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಕಸಾಪದ ಬಗ್ಗೆ ಹಗುರವಾಗಿ ಮಾತನಾಡುವುದು ಸೂಕ್ತವಲ್ಲ. ಅದು ಹಿಂದಿನ ಅಧ್ಯಕ್ಷರು ಏನೂ ಮಾಡಿಲ್ಲವೆಂದರ್ಥವೆ? ಸ್ವತಃ ಹೆಬ್ಬಾಳೆಯವರೇ ಕಸಾಪಗೆ ಮೂರು ಅವಧಿಗೆ ಅಧ್ಯಕ್ಷರಾದವರು ಈ ಹೇಳಿಕೆ ನೀಡಿದ್ದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ್ದಾರೆ.

ಪರಿಷತ್ತಿಗೆ ಯಾವುದೇ ಸಂಘ ಸಂಸ್ಥೆಗಳ ಹೋಲಿಕೆ ಸರಿಯಲ್ಲ. ಕಂಬಳಿವಾಲೆ ಬಸ್‌ ತಂಗುದಾಣವನ್ನೇ ಸ್ಥಳಾಂತರಿಸಿ ಮಳಿಗೆ ನಿರ್ಮಿಸಿಕೊಂಡಿರುವುದನ್ನು ಈಗಾಗಲೇ ಜಿಲ್ಲೆಯ ಹಿರಿಯ ಸಾಹಿತಿಗಳು ಖಂಡಿಸಿದ್ದಾರೆ. ಕಸಾಪ ವಿರುದ್ಧ ಮಾತನಾಡುವುದು ಸಮಸ್ತ ಕನ್ನಡಿಗರಿಗೆ ಬಗೆದ ಅವಮಾನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT