<p><strong>ಬೀದರ್</strong>: ಸಿರಿಗನ್ನಡ ಪುಸ್ತಕ ಮಳಿಗೆ ಸ್ಥಾಪನೆಗೆ ಸಂಬಂಧಿಸಿದಂತೆ ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಟೀಕಿಸಿದ್ದಾರೆ.</p>.<p>ಹಿರಿಯ ಕನ್ನಡ ಹೋರಾಟ ಪ್ರಭುರಾವ್ ಕಂಬಳಿವಾಲೆ ಹೆಸರಿನ ಬಸ್ ತಂಗುದಾಣ ಸ್ಥಳಾಂತರಿಸಿ ಅವರಿಗೆ ಅವಮಾನ ಮಾಡಿದ್ದಾರೆ. ಕಂಬಳಿವಾಲೆ ಸ್ಮಾರಕ ಭವನ ನಿರ್ಮಾಣಕ್ಕೆ ಮುಂದಾಗುವುದು ಬಿಟ್ಟು ಇರುವಂಥ ತಂಗುದಾಣವನ್ನೇ ತೆರವು ಗೊಳಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.</p>.<p>ಕನ್ನಡ ಸಾಹಿತ್ಯ ಪರಿಷತ್ತು ಮಾಡದ ಕೆಲಸ ನಾನು ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಕಸಾಪದ ಬಗ್ಗೆ ಹಗುರವಾಗಿ ಮಾತನಾಡುವುದು ಸೂಕ್ತವಲ್ಲ. ಅದು ಹಿಂದಿನ ಅಧ್ಯಕ್ಷರು ಏನೂ ಮಾಡಿಲ್ಲವೆಂದರ್ಥವೆ? ಸ್ವತಃ ಹೆಬ್ಬಾಳೆಯವರೇ ಕಸಾಪಗೆ ಮೂರು ಅವಧಿಗೆ ಅಧ್ಯಕ್ಷರಾದವರು ಈ ಹೇಳಿಕೆ ನೀಡಿದ್ದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ್ದಾರೆ.</p>.<p>ಪರಿಷತ್ತಿಗೆ ಯಾವುದೇ ಸಂಘ ಸಂಸ್ಥೆಗಳ ಹೋಲಿಕೆ ಸರಿಯಲ್ಲ. ಕಂಬಳಿವಾಲೆ ಬಸ್ ತಂಗುದಾಣವನ್ನೇ ಸ್ಥಳಾಂತರಿಸಿ ಮಳಿಗೆ ನಿರ್ಮಿಸಿಕೊಂಡಿರುವುದನ್ನು ಈಗಾಗಲೇ ಜಿಲ್ಲೆಯ ಹಿರಿಯ ಸಾಹಿತಿಗಳು ಖಂಡಿಸಿದ್ದಾರೆ. ಕಸಾಪ ವಿರುದ್ಧ ಮಾತನಾಡುವುದು ಸಮಸ್ತ ಕನ್ನಡಿಗರಿಗೆ ಬಗೆದ ಅವಮಾನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಸಿರಿಗನ್ನಡ ಪುಸ್ತಕ ಮಳಿಗೆ ಸ್ಥಾಪನೆಗೆ ಸಂಬಂಧಿಸಿದಂತೆ ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಟೀಕಿಸಿದ್ದಾರೆ.</p>.<p>ಹಿರಿಯ ಕನ್ನಡ ಹೋರಾಟ ಪ್ರಭುರಾವ್ ಕಂಬಳಿವಾಲೆ ಹೆಸರಿನ ಬಸ್ ತಂಗುದಾಣ ಸ್ಥಳಾಂತರಿಸಿ ಅವರಿಗೆ ಅವಮಾನ ಮಾಡಿದ್ದಾರೆ. ಕಂಬಳಿವಾಲೆ ಸ್ಮಾರಕ ಭವನ ನಿರ್ಮಾಣಕ್ಕೆ ಮುಂದಾಗುವುದು ಬಿಟ್ಟು ಇರುವಂಥ ತಂಗುದಾಣವನ್ನೇ ತೆರವು ಗೊಳಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.</p>.<p>ಕನ್ನಡ ಸಾಹಿತ್ಯ ಪರಿಷತ್ತು ಮಾಡದ ಕೆಲಸ ನಾನು ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಕಸಾಪದ ಬಗ್ಗೆ ಹಗುರವಾಗಿ ಮಾತನಾಡುವುದು ಸೂಕ್ತವಲ್ಲ. ಅದು ಹಿಂದಿನ ಅಧ್ಯಕ್ಷರು ಏನೂ ಮಾಡಿಲ್ಲವೆಂದರ್ಥವೆ? ಸ್ವತಃ ಹೆಬ್ಬಾಳೆಯವರೇ ಕಸಾಪಗೆ ಮೂರು ಅವಧಿಗೆ ಅಧ್ಯಕ್ಷರಾದವರು ಈ ಹೇಳಿಕೆ ನೀಡಿದ್ದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ್ದಾರೆ.</p>.<p>ಪರಿಷತ್ತಿಗೆ ಯಾವುದೇ ಸಂಘ ಸಂಸ್ಥೆಗಳ ಹೋಲಿಕೆ ಸರಿಯಲ್ಲ. ಕಂಬಳಿವಾಲೆ ಬಸ್ ತಂಗುದಾಣವನ್ನೇ ಸ್ಥಳಾಂತರಿಸಿ ಮಳಿಗೆ ನಿರ್ಮಿಸಿಕೊಂಡಿರುವುದನ್ನು ಈಗಾಗಲೇ ಜಿಲ್ಲೆಯ ಹಿರಿಯ ಸಾಹಿತಿಗಳು ಖಂಡಿಸಿದ್ದಾರೆ. ಕಸಾಪ ವಿರುದ್ಧ ಮಾತನಾಡುವುದು ಸಮಸ್ತ ಕನ್ನಡಿಗರಿಗೆ ಬಗೆದ ಅವಮಾನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>