‘ಪಕ್ಷದಲ್ಲಿ ನನ್ನ ಹಿರಿತನ, ಅನುಭವಕ್ಕೆ ಬೆಲೆ ನೀಡಿಲ್ಲ. ಸರಿಯಾಗಿ ನಡೆಸಿಕೊಂಡಿಲ್ಲ. ಟಿಕೆಟ್ ಯಾರಿಗೆ ಕೊಡುತ್ತಾರೆ ಎನ್ನುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪಕ್ಷ ತ್ಯಜಿಸಿರುವುದಂತೂ ನಿಜ. ರಾಜೀನಾಮೆ ಸಲ್ಲಿಸುವುದಕ್ಕೆ ಯಾವುದೇ ಕಾರಣವನ್ನೂ ನೀಡಿಲ್ಲ. ಇದೇ 20ರಂದು ಕಿತ್ತೂರಿನಲ್ಲಿ ಬೆಂಬಲಿಗರ ಸಭೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.