ಹಣಕುಣಿ: ಅನಾಥ ಮಕ್ಕಳಿಗೆ ಸಹಾಯಹಸ್ತ

ಚಿಟಗುಪ್ಪ: ಸಮೀಪದ ಹಣಕುಣಿ ಗ್ರಾಮದಲ್ಲಿ ಕೋವಿಡ್ನಿಂದಾಗಿ ಅಮ್ಮನನ್ನು ಕಳೆದುಕೊಂಡು ಅನಾಥರಾಗಿರುವ ಅಶ್ವಿನಿ ಹಾಗೂ ಮಹಾನಂದಾ ಅವರಿಗೆ ಬಿಜೆಪಿ ಮುಖಂಡರು ಸಹಾಯ ಹಸ್ತ ಚಾಚಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ ಭಾನುವಾರದ ಸಂಚಿಕೆಯಲ್ಲಿ ‘ಅವ್ವ ನಿತ್ಯ ಕಣ್ಮುಂದೆ ಬರುತ್ತಿದ್ದಾಳೆ’ ಶೀರ್ಷಿಕೆಯಡಿ ಮಾನವೀಯ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಮಕ್ಕಳ ಮನೆಗೆ ಭೇಟಿ ನೀಡಿ ಅವರ ಶಿಕ್ಷಣಕ್ಕೆ ₹10 ಸಾವಿರ ನೆರವು ಹಾಗೂ ದಿನಸಿ ಪದಾರ್ಥಗಳನ್ನು ನೀಡಿದ್ದಾರೆ.
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಾಭು ಟೈಗರ್, ಗಣ್ಯರಾದ ಗಿರೀಶ್ ತುಂಬಾ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್ ರೆಡ್ಡಿ, ಖಾಜಾಮಿಯ್ಯ, ರುಬಿಟ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.