ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣಕುಣಿ: ಅನಾಥ ಮಕ್ಕಳಿಗೆ ಸಹಾಯಹಸ್ತ

Last Updated 13 ಜೂನ್ 2021, 15:32 IST
ಅಕ್ಷರ ಗಾತ್ರ

ಚಿಟಗುಪ್ಪ: ಸಮೀಪದ ಹಣಕುಣಿ ಗ್ರಾಮದಲ್ಲಿ ಕೋವಿಡ್‌ನಿಂದಾಗಿ ಅಮ್ಮನನ್ನು ಕಳೆದುಕೊಂಡು ಅನಾಥರಾಗಿರುವ ಅಶ್ವಿನಿ ಹಾಗೂ ಮಹಾನಂದಾ ಅವರಿಗೆ ಬಿಜೆಪಿ ಮುಖಂಡರು ಸಹಾಯ ಹಸ್ತ ಚಾಚಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ ಭಾನುವಾರದ ಸಂಚಿಕೆಯಲ್ಲಿ ‘ಅವ್ವ ನಿತ್ಯ ಕಣ್ಮುಂದೆ ಬರುತ್ತಿದ್ದಾಳೆ’ ಶೀರ್ಷಿಕೆಯಡಿ ಮಾನವೀಯ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಮಕ್ಕಳ ಮನೆಗೆ ಭೇಟಿ ನೀಡಿ ಅವರ ಶಿಕ್ಷಣಕ್ಕೆ ₹10 ಸಾವಿರ ನೆರವು ಹಾಗೂ ದಿನಸಿ ಪದಾರ್ಥಗಳನ್ನು ನೀಡಿದ್ದಾರೆ.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಾಭು ಟೈಗರ್‌, ಗಣ್ಯರಾದ ಗಿರೀಶ್‌ ತುಂಬಾ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್‌ ರೆಡ್ಡಿ, ಖಾಜಾಮಿಯ್ಯ, ರುಬಿಟ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT