<p>ಔರಾದ್: ‘ಹೇಮರಡ್ಡಿ ಮಲ್ಲಮ್ಮ ಕಷ್ಟ-ಕಾರ್ಪಣ್ಯಗಳ ನಡುವೆಯೂ ಆದರ್ಶ ಬದುಕು ಸಾಗಿಸಿ ಸಮಾಜಕ್ಕೆ ದಾರಿ ದೀಪವಾದವರು’ ಎಂದು ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹೇಳಿದರು.</p>.<p>ತಾಲ್ಲೂಕು ಆಡಳಿತ ಮಂಗಳವಾರ ಇಲ್ಲಿ ಆಯೋಜಿಸಿದ್ದ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ‘ಮಲ್ಲಮ್ಮ ಕಷ್ಟಗಳನ್ನು ನುಂಗಿ ಗಂಡನಮನೆ ಬೆಳೆಸಿದರು. ಶ್ರೀಶೈಲ ಚೆನ್ನಮಲ್ಲಿಕಾರ್ಜುನನ್ನು ಅರಾಧಿಸಿ ಅಮರತ್ವ ಸಾಧಿಸಿದವರು. ರಡ್ಡಿ ಸಮುದಾಯದ ಬದುಕು ಸದಾ ಬಂಗಾರವಾಗಲಿ ಎಂದು ಪ್ರಾರ್ಥಿಸಿದ ಆ ಮಹಾ ತಾಯಿ ಸಮಾಜಕ್ಕೆ ಮಾದರಿ’ ಎಂದರು.</p>.<p>ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಸ್ವಾಗತಿಸಿ ‘ಹೇಮರೆಡ್ಡಿ ಮಲ್ಲಮ್ಮ ಅವರಂತಹ ತಾಯಿಯ ತ್ಯಾಗ ಬಹಳ ದೊಡ್ಡದು. ಅವರ ವಿಚಾರಗಳು ಎಲ್ಲ ಸಮಾಜಕ್ಕೂ ಆದರ್ಶವಾಗಬೇಕು’ ಎಂದು ಹೇಳಿದರು.</p>.<p>ಗ್ರೇಡ್-2 ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ, ತಾಲ್ಲೂಕು ಪಂಚಾಯಿತಿ ಇಒ ಬೀರೇಂದ್ರಸಿಂಗ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್. ನಗನೂರ, ರಡ್ಡಿ ಸಮಾಜದ ತಾಲ್ಲೂಕು ಅಧ್ಯಕ್ಷ ಶಂಕರರಡ್ಡಿ, ಗೌರವಾಧ್ಯಕ್ಷ ಅಶೋಕರಡ್ಡಿ, ಮಾರುತಿರಡ್ಡಿ, ಜೈಪಾಲರಡ್ಡಿ, ಘಾಳರಡ್ಡಿ, ನರಸಾರಡ್ಡಿ, ಅಂಜಾರಡ್ಡಿ, ಗೋವಿಂದರಡ್ಡಿ, ಗುರುನಾಥರಡ್ಡಿ, ಸಾಯಿನಾಥರಡ್ಡಿ ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರದ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ‘ಹೇಮರಡ್ಡಿ ಮಲ್ಲಮ್ಮ ಕಷ್ಟ-ಕಾರ್ಪಣ್ಯಗಳ ನಡುವೆಯೂ ಆದರ್ಶ ಬದುಕು ಸಾಗಿಸಿ ಸಮಾಜಕ್ಕೆ ದಾರಿ ದೀಪವಾದವರು’ ಎಂದು ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹೇಳಿದರು.</p>.<p>ತಾಲ್ಲೂಕು ಆಡಳಿತ ಮಂಗಳವಾರ ಇಲ್ಲಿ ಆಯೋಜಿಸಿದ್ದ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ‘ಮಲ್ಲಮ್ಮ ಕಷ್ಟಗಳನ್ನು ನುಂಗಿ ಗಂಡನಮನೆ ಬೆಳೆಸಿದರು. ಶ್ರೀಶೈಲ ಚೆನ್ನಮಲ್ಲಿಕಾರ್ಜುನನ್ನು ಅರಾಧಿಸಿ ಅಮರತ್ವ ಸಾಧಿಸಿದವರು. ರಡ್ಡಿ ಸಮುದಾಯದ ಬದುಕು ಸದಾ ಬಂಗಾರವಾಗಲಿ ಎಂದು ಪ್ರಾರ್ಥಿಸಿದ ಆ ಮಹಾ ತಾಯಿ ಸಮಾಜಕ್ಕೆ ಮಾದರಿ’ ಎಂದರು.</p>.<p>ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಸ್ವಾಗತಿಸಿ ‘ಹೇಮರೆಡ್ಡಿ ಮಲ್ಲಮ್ಮ ಅವರಂತಹ ತಾಯಿಯ ತ್ಯಾಗ ಬಹಳ ದೊಡ್ಡದು. ಅವರ ವಿಚಾರಗಳು ಎಲ್ಲ ಸಮಾಜಕ್ಕೂ ಆದರ್ಶವಾಗಬೇಕು’ ಎಂದು ಹೇಳಿದರು.</p>.<p>ಗ್ರೇಡ್-2 ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ, ತಾಲ್ಲೂಕು ಪಂಚಾಯಿತಿ ಇಒ ಬೀರೇಂದ್ರಸಿಂಗ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್. ನಗನೂರ, ರಡ್ಡಿ ಸಮಾಜದ ತಾಲ್ಲೂಕು ಅಧ್ಯಕ್ಷ ಶಂಕರರಡ್ಡಿ, ಗೌರವಾಧ್ಯಕ್ಷ ಅಶೋಕರಡ್ಡಿ, ಮಾರುತಿರಡ್ಡಿ, ಜೈಪಾಲರಡ್ಡಿ, ಘಾಳರಡ್ಡಿ, ನರಸಾರಡ್ಡಿ, ಅಂಜಾರಡ್ಡಿ, ಗೋವಿಂದರಡ್ಡಿ, ಗುರುನಾಥರಡ್ಡಿ, ಸಾಯಿನಾಥರಡ್ಡಿ ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರದ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>