ನ್ಯಾಯಮೂರ್ತಿ ರವಿ ಮಳಿಮಠ ಅವರಿಗೆ ಬೆಂಗಳೂರು ವಕೀಲರ ಸಂಘದ ವತಿಯಿಂದ ನೀಡಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ನ್ಯಾಯಮೂರ್ತಿಗಳ ಕುಟುಂಬದ ಮೂರನೇ ತಲೆಮಾರಿನವರಾದ ರವಿ ವಿ. ಮಳಿಮಠ ಅವರು, ಅತ್ಯಂತ ಕರಾರುವಾಕ್ಕು ಹಾಗೂ ಖಚಿತವಾದ ನ್ಯಾಯೋಚಿತ ನಿರ್ಣಯ ಕೈಗೊಳ್ಳುವ ಮನಃಸ್ಥಿತಿ ಉಳ್ಳವರು. ಕ್ರಿಮಿನಲ್ ಪ್ರಕರಣಗಳ ವಿಲೇವಾರಿಗೆ ಹೆಸರುವಾಸಿ. ಇವರ ವರ್ಗಾವಣೆಯಿಂದ ಎಲ್ಲೊ ಒಂದು ಕಡೆ ರಾಜ್ಯಕ್ಕೆ ನಷ್ಟವಾಗಲಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.