ಜಿಲ್ಲಾ ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಓಂಕಾರ ಪಾಟೀಲ, ರಾಯಚೂರು ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಜಿ.ಎನ್. ಶ್ರೀಧರ ಅವರು, ಕೋಳಿ ಸಾಕಾಣಿಕೆಗೆ ಸಂಬಂಧಿಸಿದ ಸರ್ಕಾರದ ಯೋಜನೆಗಳು, ಕೋಳಿಗಳಿಗೆ ಬರುವ ರೋಗಗಳು ಹಾಗೂ ಲಸಿಕೆ ಕುರಿತು ಮಾಹಿತಿ ನೀಡಿದರು.
ವಿಜ್ಞಾನಿ ಡಾ. ಅಕ್ಷಯಕುಮಾರ ಸ್ವಾಗತಿಸಿದರು. ತೋಟಗಾರಿಕೆ ವಿಜ್ಞಾನಿ ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ನಿರೂಪಿಸಿದರು. ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಸಿದ್ದು ಮಣಗೆ ವಂದಿಸಿದರು.