<p>ಔರಾದ್: ಮಹಾರಾಷ್ಟ್ರದ ವಜ್ಜರ್ ಗಡಿಯಿಂದ ಔರಾದ್ವರೆಗೆ ಹೆದ್ದಾರಿ ನಿರ್ಮಿಸಲು ಅನುಮೋದನೆ ನೀಡುವಂತೆ ಶಾಸಕ ಪ್ರಭು ಚವಾಣ್ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.</p>.<p>ಶಾಸಕರು ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಸಚಿವ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಕುರಿತು ಬೇಡಿಕೆ ಸಲ್ಲಿಸಿದ್ದಾರೆ.</p>.<p>‘ಮಹಾರಾಷ್ಟ್ರ ರಾಜ್ಯದ ಹಣೆಗಾಂವ್, ಮುಖೇಡ್ ಮೂಲಕ ನಾಂದೇಡ್ಗೆ ಹೋಗುವ ರಾಷ್ಟ್ರೀಯ ಹೆದ್ದಾರಿ 161(ಎ) ನಾನು ಪ್ರತಿನಿಧಿಸುವ ಔರಾದ್ ಮತಕ್ಷೇತ್ರಕ್ಕೆ ಹೊಂದಿಕೊಂಡಿದೆ. ಈ ಹೆದ್ದಾರಿ ಹಾದು ಹೋಗುವ ಮಹಾರಾಷ್ಟ್ರದ ವಜ್ಜರ್ ಬಾರ್ಡರ್ನಿಂದ ಔರಾದ್ವರೆಗೆ ಕೇವಲ 10 ಕಿ.ಮೀ. ಇದೆ. ಎರಡೂ ರಾಜ್ಯಗಳಿಗೆ ಸಂಪರ್ಕಿಸುವ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿದರೆ ಈ ಭಾಗದ ಜನರಿಗೆ ತುಂಬಾ ಅನುಕೂಲವಾಗಲಿದೆ’ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ. ತಮ್ಮ ಬೇಡಿಕೆಗೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ.</p>.<p>ಬ್ಯಾರೇಜ್ಗೆ ಅನುದಾನ ಮನವಿ: ಬೀದರ್ ಜಿಲ್ಲೆಯ ಗಡಿ ಭಾಗದಲ್ಲಿ ಕೆರೆ, ಬ್ಯಾರೇಜ್ ನಿರ್ಮಿಸಲು ಅನುದಾನ ಕೊಡುವಂತೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೂ ಶಾಸಕ ಚವಾಣ್ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. </p>.<p> ಔರಾದ್ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಲ್ಲದೆ ರೈತರು ಹಾಗೂ ಸಾರ್ವಜನಿಕರು ತೀರಾ ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿ ಬರ ಪರಿಸ್ಥಿತಿ ಸಾಮಾನ್ಯವಾಗಿದೆ. ಹೀಗಾಗಿ ಇಲ್ಲಿ ಕೆರೆ, ಬ್ಯಾರೇಜ್, ಬಾಂದಾರ ನಿರ್ಮಿಸುವುದು ಅಗತ್ಯವಾಗಿದೆ. ಈ ಸಂಬಂಧ ಈಗಾಗಲೇ ₹ 114.64 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ಕೊಡುವಂತೆ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ಮಹಾರಾಷ್ಟ್ರದ ವಜ್ಜರ್ ಗಡಿಯಿಂದ ಔರಾದ್ವರೆಗೆ ಹೆದ್ದಾರಿ ನಿರ್ಮಿಸಲು ಅನುಮೋದನೆ ನೀಡುವಂತೆ ಶಾಸಕ ಪ್ರಭು ಚವಾಣ್ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.</p>.<p>ಶಾಸಕರು ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಸಚಿವ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಕುರಿತು ಬೇಡಿಕೆ ಸಲ್ಲಿಸಿದ್ದಾರೆ.</p>.<p>‘ಮಹಾರಾಷ್ಟ್ರ ರಾಜ್ಯದ ಹಣೆಗಾಂವ್, ಮುಖೇಡ್ ಮೂಲಕ ನಾಂದೇಡ್ಗೆ ಹೋಗುವ ರಾಷ್ಟ್ರೀಯ ಹೆದ್ದಾರಿ 161(ಎ) ನಾನು ಪ್ರತಿನಿಧಿಸುವ ಔರಾದ್ ಮತಕ್ಷೇತ್ರಕ್ಕೆ ಹೊಂದಿಕೊಂಡಿದೆ. ಈ ಹೆದ್ದಾರಿ ಹಾದು ಹೋಗುವ ಮಹಾರಾಷ್ಟ್ರದ ವಜ್ಜರ್ ಬಾರ್ಡರ್ನಿಂದ ಔರಾದ್ವರೆಗೆ ಕೇವಲ 10 ಕಿ.ಮೀ. ಇದೆ. ಎರಡೂ ರಾಜ್ಯಗಳಿಗೆ ಸಂಪರ್ಕಿಸುವ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿದರೆ ಈ ಭಾಗದ ಜನರಿಗೆ ತುಂಬಾ ಅನುಕೂಲವಾಗಲಿದೆ’ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ. ತಮ್ಮ ಬೇಡಿಕೆಗೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ.</p>.<p>ಬ್ಯಾರೇಜ್ಗೆ ಅನುದಾನ ಮನವಿ: ಬೀದರ್ ಜಿಲ್ಲೆಯ ಗಡಿ ಭಾಗದಲ್ಲಿ ಕೆರೆ, ಬ್ಯಾರೇಜ್ ನಿರ್ಮಿಸಲು ಅನುದಾನ ಕೊಡುವಂತೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೂ ಶಾಸಕ ಚವಾಣ್ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. </p>.<p> ಔರಾದ್ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಲ್ಲದೆ ರೈತರು ಹಾಗೂ ಸಾರ್ವಜನಿಕರು ತೀರಾ ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿ ಬರ ಪರಿಸ್ಥಿತಿ ಸಾಮಾನ್ಯವಾಗಿದೆ. ಹೀಗಾಗಿ ಇಲ್ಲಿ ಕೆರೆ, ಬ್ಯಾರೇಜ್, ಬಾಂದಾರ ನಿರ್ಮಿಸುವುದು ಅಗತ್ಯವಾಗಿದೆ. ಈ ಸಂಬಂಧ ಈಗಾಗಲೇ ₹ 114.64 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ಕೊಡುವಂತೆ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>