ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ

Last Updated 12 ಆಗಸ್ಟ್ 2022, 15:51 IST
ಅಕ್ಷರ ಗಾತ್ರ

ಬೀದರ್: ಹಿಂದೂ ಜಾಗರಣ ವೇದಿಕೆಯಿಂದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಅಖಂಡ ಭಾರತ ಸಂಕಲ್ಪ -2022 ಅಂಗವಾಗಿ ಆ.14ರಂದು ಪಂಜಿನ ಮೆರವಣಿಗೆ ಹಾಗೂ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ.


ನಗರದ ಅಂಬೇಡ್ಕರ್ ವೃತದಲ್ಲಿ ಅಂದು ಸಂಜೆ 6ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಆಣದೂರಿನ ಭಂತೆ ಜ್ಞಾನಸಾಗರ್ ಥೇರೊ ಸಾನಿಧ್ಯ, ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕ ಕೆ.ಕೆ. ಶಿವರಾಜ, ವಕ್ತಾರರಾಗಿ ಪ್ರಜ್ಞಾ ಪ್ರವಾಹ ಸಂಯೋಜಕ ಶಿವಾನಂದ ದಾಡಗೆ ಪಾಲ್ಗೊಳ್ಳುವರು. ಹಿಂದೂ ಜಾಗರಣ ವೇದಿಕೆಯ ಕಲಬುರ್ಗಿ ವಿಭಾಗದ ಸಂಯೋಜಕ ಶಿವಶರಣಪ್ಪ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡುವರು.


ಪಂಜಿನ ಮೆರವಣಿಗೆಯು ನಗರದ ಸರಸ್ವತಿ ಶಾಲೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT