ನಗರದ ಅಂಬೇಡ್ಕರ್ ವೃತದಲ್ಲಿ ಅಂದು ಸಂಜೆ 6ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಆಣದೂರಿನ ಭಂತೆ ಜ್ಞಾನಸಾಗರ್ ಥೇರೊ ಸಾನಿಧ್ಯ, ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕ ಕೆ.ಕೆ. ಶಿವರಾಜ, ವಕ್ತಾರರಾಗಿ ಪ್ರಜ್ಞಾ ಪ್ರವಾಹ ಸಂಯೋಜಕ ಶಿವಾನಂದ ದಾಡಗೆ ಪಾಲ್ಗೊಳ್ಳುವರು. ಹಿಂದೂ ಜಾಗರಣ ವೇದಿಕೆಯ ಕಲಬುರ್ಗಿ ವಿಭಾಗದ ಸಂಯೋಜಕ ಶಿವಶರಣಪ್ಪ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡುವರು.