ಬೀದರ್: ಇಲ್ಲಿಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಬೀಜ ದಿನೋತ್ಸವ ನಡೆಯಿತು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಸಸಿಗೆ ನೀರೆರೆದು ಉದ್ಘಾಟಿಸಿದರು. ಕೇಂದ್ರದ ಮುಖ್ಯಸ್ಥ ಡಾ. ಸುನೀಲ್ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಿಂಗಾರು ಬೆಳೆಗಳಾದ ಕಡಲೆ, ಕುಸುಬೆ ಹಾಗೂ ಜೋಳದಲ್ಲಿ ಬರುವ ಕೀಟ ಹಾಗೂ ರೋಗಗಳ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.
ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಜ್ಞಾನದೇವ ಬುಳ್ಳಾ, ಬಸವರಾಜ ಬಿರಾದಾರ, ಕೃಷಿ ವಿಜ್ಞಾನಿಗಳಾದ ಡಾ. ಆರ್.ಎಲ್. ಜಾಧವ್, ಡಾ. ಶೋಭಾರಾಣಿ, ಡಾ. ಸಿದ್ರಾಮಪ್ಪ, ಡಾ. ಜ್ಞಾನದೇವ ಬುಳ್ಳಾ ಇದ್ದರು.