<p><strong>ಬೀದರ್:</strong> ‘ಕೇಂದ್ರದಲ್ಲಿರುವುದು ಹಿಟ್ಲರ್ ಸರ್ಕಾರ, ರಾಜ್ಯಗಳ ಅಭಿಪ್ರಾಯ ಪಡೆಯದೆ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಅನುಷ್ಠಾನಕ್ಕೆ ತರಲು ಹೊರಟಿದೆ’ ಎಂದು ಶಾಸಕ ಎಂ.ಬಿ.ಪಾಟೀಲ ವಾಗ್ದಾಳಿ ನಡೆಸಿದರು.</p>.<p>‘ಬಿಜೆಪಿ ಸರ್ಕಾರದ ಉದ್ದೇಶ ಸರಿಯಾಗಿದ್ದರೆ ಸಂಸತ್ತಿನಲ್ಲಿ ಏಕೆ ಚರ್ಚೆ ಮಾಡಲಿಲ್ಲ. ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ಏಕೆ ನಡೆಸಲಿಲ್ಲ. ಚರ್ಚೆ ಮಾಡದೆ ಕಾಯ್ದೆ ಜಾರಿಗೊಳಿಸುತ್ತಿದೆ. ನೋಟ್ ಬ್ಯಾನ್ ಮಾಡಿದಂತೆ ಪೌರತ್ವ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಂಗಳೂರಿನಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ಯುವಕರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಅಲ್ಲಿಗೆ ಮುಖ್ಯಮಂತ್ರಿ ಭೇಟಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿಗೆ ಅವಕಾಶ ನೀಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಗೋಲಿಬಾರ್ ಪ್ರಕರಣಕ್ಕೆ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಪೊಲೀಸ್ ಆಯುಕ್ತರು ಹೊಣೆಯಾದರೆ, ದೇಶದಲ್ಲಿ ಪ್ರತಿಭಟನೆಯ ಸಂದರ್ಭದಲ್ಲಿ ಸಂಭವಿಸುತ್ತಿರುವ ಸಾವುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇರ ಕಾರಣವಾಗಿದ್ದಾರೆ’ ಎಂದು ಆರೋಪ ಮಾಡಿದರು.</p>.<p>‘ಯಾವುದೇ ಅಹಿತಕರ ಘಟನೆ ನಡೆದಾಗ ಪೊಲೀಸರು ಮೊದಲು ಅಶ್ರುವಾಯು ಸಿಡಿಸಿ ಜನರನ್ನು ಚದುರಿಸಬೇಕು. ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಬೇಕು. ಆದರೆ ಮಂಗಳೂರಿನಲ್ಲಿ ನೇರವಾಗಿ ಗೋಲಿಬಾರ್ ಮಾಡಲಾಗಿದೆ’ ಎಂದು ಆಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಕೇಂದ್ರದಲ್ಲಿರುವುದು ಹಿಟ್ಲರ್ ಸರ್ಕಾರ, ರಾಜ್ಯಗಳ ಅಭಿಪ್ರಾಯ ಪಡೆಯದೆ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಅನುಷ್ಠಾನಕ್ಕೆ ತರಲು ಹೊರಟಿದೆ’ ಎಂದು ಶಾಸಕ ಎಂ.ಬಿ.ಪಾಟೀಲ ವಾಗ್ದಾಳಿ ನಡೆಸಿದರು.</p>.<p>‘ಬಿಜೆಪಿ ಸರ್ಕಾರದ ಉದ್ದೇಶ ಸರಿಯಾಗಿದ್ದರೆ ಸಂಸತ್ತಿನಲ್ಲಿ ಏಕೆ ಚರ್ಚೆ ಮಾಡಲಿಲ್ಲ. ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ಏಕೆ ನಡೆಸಲಿಲ್ಲ. ಚರ್ಚೆ ಮಾಡದೆ ಕಾಯ್ದೆ ಜಾರಿಗೊಳಿಸುತ್ತಿದೆ. ನೋಟ್ ಬ್ಯಾನ್ ಮಾಡಿದಂತೆ ಪೌರತ್ವ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಂಗಳೂರಿನಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ಯುವಕರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಅಲ್ಲಿಗೆ ಮುಖ್ಯಮಂತ್ರಿ ಭೇಟಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿಗೆ ಅವಕಾಶ ನೀಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಗೋಲಿಬಾರ್ ಪ್ರಕರಣಕ್ಕೆ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಪೊಲೀಸ್ ಆಯುಕ್ತರು ಹೊಣೆಯಾದರೆ, ದೇಶದಲ್ಲಿ ಪ್ರತಿಭಟನೆಯ ಸಂದರ್ಭದಲ್ಲಿ ಸಂಭವಿಸುತ್ತಿರುವ ಸಾವುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇರ ಕಾರಣವಾಗಿದ್ದಾರೆ’ ಎಂದು ಆರೋಪ ಮಾಡಿದರು.</p>.<p>‘ಯಾವುದೇ ಅಹಿತಕರ ಘಟನೆ ನಡೆದಾಗ ಪೊಲೀಸರು ಮೊದಲು ಅಶ್ರುವಾಯು ಸಿಡಿಸಿ ಜನರನ್ನು ಚದುರಿಸಬೇಕು. ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಬೇಕು. ಆದರೆ ಮಂಗಳೂರಿನಲ್ಲಿ ನೇರವಾಗಿ ಗೋಲಿಬಾರ್ ಮಾಡಲಾಗಿದೆ’ ಎಂದು ಆಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>