<p><strong>ಬೀದರ್:</strong> ‘ಎಚ್ಐವಿ ಸೋಂಕಿತರನ್ನು ವಧು–ವರರ ಸಮಾವೇಶದ ಮೂಲಕ ಮದುವೆ ಮಾಡಲಾಗುತ್ತಿದ್ದು, ರಾಜ್ಯದಾದ್ಯಂತ ಇದುವರೆಗೆ 120 ಜನರ ವಿವಾಹ ಮಾಡಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿಯ ಉಪನಿರ್ದೇಶಕ ಗೋವಿಂದರಾಜು ತಿಳಿಸಿದರು.</p>.<p>ನಗರದಲ್ಲಿ ಏರ್ಪಡಿಸಿದ್ದ ವಧು-ವರರ ಅನ್ವೇಷಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.</p>.<p>ಬರುವ ದಿನಗಳಲ್ಲಿ ಆನ್ಲೈನ್ ಮ್ಯಾಟ್ರಿಮೋನಿ ಜಾಲತಾಣ ವೇದಿಕೆ ಸೃಷ್ಟಿಸಲಾಗುವುದು. ಅದರಲ್ಲಿ ಎಚ್.ಐ.ವಿ ಸೋಂಕಿತರು ನೋಂದಣಿ ಮಾಡಿಸಿಕೊಂಡು ತಮ್ಮ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ ಮಾತನಾಡಿ, ಬೀದರ್ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಸಮಾವೇಶದ ಸದುಪಯೋಗವನ್ನು ಎಚ್ಐವಿ ಸೋಂಕಿತರು ಪಡೆದುಕೊಳ್ಳಬೇಕು ಎಂದರು.</p>.<p>ಸೊಸೈಟಿಯ ಸಹಾಯಕ ನಿರ್ದೇಶಕ ಶ್ರೀನಿವಾಸ ಸಿ. ಮಾತನಾಡಿ, ಸಮಾವೇಶದಲ್ಲಿ ವಧು ವರರು ತಮ್ಮ ಸಂಪೂರ್ಣ ಮಾಹಿತಿಯನ್ನು ಸರಿಯಾಗಿ ನೀಡಬೇಕು ಎಂದು ಹೇಳಿದರು.</p>.<p>ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅನೀಲಕುಮಾರ ಚಿಂತಾಮಣಿ ಮಾತನಾಡಿ, 2030 ರೊಳಗೆ ಎಚ್.ಐ.ವಿ/ಏಡ್ಸ್ ಸೋಂಕಿತರ ಸಂಖ್ಯೆ ಸೊನ್ನೆಗೆ ತರಲು ಹಲವಾರು ಕಾರ್ಯಕ್ರಮ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.</p>.<p>ವಿಜಯಪುರ ಎಆರ್ಟಿ ಕೇಂದ್ರದ ಹಿರಿಯ ಆಪ್ತ ಸಮಾಲೋಚಕ ರವಿಕಿತ್ತೂರು ಕಾರ್ಯಕ್ರಮದ ಉದ್ದೇಶ ವಿವರಿಸಿದರು. ವಧು –ವರರು, ಅವರ ಪೋಷಕರು ಪಾಲ್ಗೊಂಡಿದ್ದರು. ಪ್ರಯೋಗ ಶಾಲಾ ತಂತ್ರಜ್ಞರ ಅರವಿಂದ ಕುಲಕರ್ಣಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಎಚ್ಐವಿ ಸೋಂಕಿತರನ್ನು ವಧು–ವರರ ಸಮಾವೇಶದ ಮೂಲಕ ಮದುವೆ ಮಾಡಲಾಗುತ್ತಿದ್ದು, ರಾಜ್ಯದಾದ್ಯಂತ ಇದುವರೆಗೆ 120 ಜನರ ವಿವಾಹ ಮಾಡಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿಯ ಉಪನಿರ್ದೇಶಕ ಗೋವಿಂದರಾಜು ತಿಳಿಸಿದರು.</p>.<p>ನಗರದಲ್ಲಿ ಏರ್ಪಡಿಸಿದ್ದ ವಧು-ವರರ ಅನ್ವೇಷಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.</p>.<p>ಬರುವ ದಿನಗಳಲ್ಲಿ ಆನ್ಲೈನ್ ಮ್ಯಾಟ್ರಿಮೋನಿ ಜಾಲತಾಣ ವೇದಿಕೆ ಸೃಷ್ಟಿಸಲಾಗುವುದು. ಅದರಲ್ಲಿ ಎಚ್.ಐ.ವಿ ಸೋಂಕಿತರು ನೋಂದಣಿ ಮಾಡಿಸಿಕೊಂಡು ತಮ್ಮ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ ಮಾತನಾಡಿ, ಬೀದರ್ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಸಮಾವೇಶದ ಸದುಪಯೋಗವನ್ನು ಎಚ್ಐವಿ ಸೋಂಕಿತರು ಪಡೆದುಕೊಳ್ಳಬೇಕು ಎಂದರು.</p>.<p>ಸೊಸೈಟಿಯ ಸಹಾಯಕ ನಿರ್ದೇಶಕ ಶ್ರೀನಿವಾಸ ಸಿ. ಮಾತನಾಡಿ, ಸಮಾವೇಶದಲ್ಲಿ ವಧು ವರರು ತಮ್ಮ ಸಂಪೂರ್ಣ ಮಾಹಿತಿಯನ್ನು ಸರಿಯಾಗಿ ನೀಡಬೇಕು ಎಂದು ಹೇಳಿದರು.</p>.<p>ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅನೀಲಕುಮಾರ ಚಿಂತಾಮಣಿ ಮಾತನಾಡಿ, 2030 ರೊಳಗೆ ಎಚ್.ಐ.ವಿ/ಏಡ್ಸ್ ಸೋಂಕಿತರ ಸಂಖ್ಯೆ ಸೊನ್ನೆಗೆ ತರಲು ಹಲವಾರು ಕಾರ್ಯಕ್ರಮ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.</p>.<p>ವಿಜಯಪುರ ಎಆರ್ಟಿ ಕೇಂದ್ರದ ಹಿರಿಯ ಆಪ್ತ ಸಮಾಲೋಚಕ ರವಿಕಿತ್ತೂರು ಕಾರ್ಯಕ್ರಮದ ಉದ್ದೇಶ ವಿವರಿಸಿದರು. ವಧು –ವರರು, ಅವರ ಪೋಷಕರು ಪಾಲ್ಗೊಂಡಿದ್ದರು. ಪ್ರಯೋಗ ಶಾಲಾ ತಂತ್ರಜ್ಞರ ಅರವಿಂದ ಕುಲಕರ್ಣಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>