ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕ್ಷೇತ್ರದ ಖಾಸಗೀಕರಣ ತಡೆಗೆ ಆಗ್ರಹ

Last Updated 29 ಸೆಪ್ಟೆಂಬರ್ 2020, 16:41 IST
ಅಕ್ಷರ ಗಾತ್ರ

ಬೀದರ್: ಕೃಷಿ ಕ್ಷೇತ್ರದ ಖಾಸಗೀಕರಣವನ್ನು ತಡೆಯಬೇಕು ಎಂದು ಬಹುಜನ ಸಮಾಜ ಪಕ್ಷ ಆಗ್ರಹಿಸಿದೆ.
ಪಕ್ಷದ ಪದಾಧಿಕಾರಿಗಳು ನಿಯೋಗದಲ್ಲಿ ನಗರದಲ್ಲಿ ಮಂಗಳವಾರ ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಗಂಗಾದೇವಿ ಅವರಿಗೆ ಸಲ್ಲಿಸಿದರು.

ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕು. ಕೃಷಿ ಭೂಮಿ ಖಾಸಗಿಕರಣ ನಿಲ್ಲಿಸಬೇಕು. ಉಳ್ಳುವವನಿಗೆ ಕೃಷಿ ಭೂಮಿ ಖಾತರಿಪಡಿಸಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು. ಉದ್ಯೋಗಾವಕಾಶ ಹೆಚ್ಚಿಸಬೇಕು. ಶಿಕ್ಷಣ, ಆರೋಗ್ಯ, ಸಾರಿಗೆ, ಮೂಲಸೌಲಭ್ಯ ಕ್ಷೇತ್ರಗಳ ಖಾಸಗೀಕರಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಪಕ್ಷದ ಜಿಲ್ಲಾ ಸಂಯೋಜಕರಾದ ಪ್ರಕಾಶ ಕೋಟೆ, ಸುಭಾಷ ಸಿಕಿಂದ್ರಾಪುರ, ಬೀದರ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸತ್ಯದೀಪ ಹಾವನೂರ, ಪ್ರಮುಖರಾದ ತಿಪ್ಪಣ್ಣ ಎಸ್. ವಾಲಿ, ಅಶೋಕ ಮಾಳಗೆ, ಯೋಹನ್ ಡಿಸೋಜಾ, ಜಾಫರ್ ಖುರೇಶಿ, ಫಹೀಮ್ ಪಟೇಲ್, ವಿನಯಕುಮಾರ ಭಾವಿಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT