<p><strong>ಬೀದರ್</strong>: ‘ರೈತರ ಹೊಲಗಳಿಗೆ ಅಧಿಕಾರಿಗಳು ಭೇಟಿ ನೀಡಿದರೆ ವಾಸ್ತವ ಸಮಸ್ಯೆ ಗೊತ್ತಾಗುತ್ತದೆ. ಅದಕ್ಕೆ ಸೂಕ್ತ ಪರಿಹಾರ ಒದಗಿಸಲು ಸಾಧ್ಯವಾಗುತ್ತದೆ’ ಎಂದು ತೋಟಗಾರಿಕೆ ಕಾಲೇಜಿನ ಡೀನ್ ಎಸ್.ವಿ.ಪಾಟೀಲ ತಿಳಿಸಿದರು.</p>.<p>ನಗರದ ತೋಟಗಾರಿಕೆ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಎರಡನೇ ತ್ರೈಮಾಸಿಕ ತೋಟಗಾರಿಕೆ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ತೋಟಗಾರಿಕೆ ಇಲಾಖೆಯ ವತಿಯಿಂದ ರೈತರಿಗಾಗಿ ಅನೇಕ ಯೋಜನೆಗಳನ್ನು, ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅದರ ಬಗ್ಗೆಯೂ ರೈತರಿಗೆ ಮಾಹಿತಿ ಒದಗಿಸಬಹುದು ಎಂದರು.</p>.<p>ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದ ವಿಸ್ತರಣಾ ಮುಂದಾಳು ವಿ.ಪಿ. ಸಿಂಗ್ ಮಾತನಾಡಿ, ಮುಂದೆ ನಡೆಯಲಿರುವ ತೋಟಗಾರಿಕೆ ಮೇಳದಲ್ಲಿ ಶ್ರೇಷ್ಠ ರೈತ/ರೈತ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಕೆ ಕುರಿತು ರೈತರಿಗೆ ಮಾಹಿತಿ ಒದಗಿಸಬೇಕು. ಫೆಬ್ರುವರಿ 10ರಿಂದ 12ರ ವರೆಗೆ ರೈತರಿಗೆ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಗುತ್ತದೆ. ಅದರ ಬಗ್ಗೆಯೂ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.</p>.<p>ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸೋಮನಾಥ ಘಾಳೆ, ಹಿರಿಯ ಸಹಾಯಕ ಸುನೀಲ ಗಂಗಶ್ರೀ, ಸಹಾಯಕ ಪ್ರಾಧ್ಯಾಪಕರಾದ ದುಷ್ಯಂತ ಓಲೇಕರ, ಪ್ರಶಾಂತ, ಜಿಲ್ಲೆಯ 46 ಸಹಾಯಕ ತೋಟಗಾರಿಕೆ ಅಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ರೈತರ ಹೊಲಗಳಿಗೆ ಅಧಿಕಾರಿಗಳು ಭೇಟಿ ನೀಡಿದರೆ ವಾಸ್ತವ ಸಮಸ್ಯೆ ಗೊತ್ತಾಗುತ್ತದೆ. ಅದಕ್ಕೆ ಸೂಕ್ತ ಪರಿಹಾರ ಒದಗಿಸಲು ಸಾಧ್ಯವಾಗುತ್ತದೆ’ ಎಂದು ತೋಟಗಾರಿಕೆ ಕಾಲೇಜಿನ ಡೀನ್ ಎಸ್.ವಿ.ಪಾಟೀಲ ತಿಳಿಸಿದರು.</p>.<p>ನಗರದ ತೋಟಗಾರಿಕೆ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಎರಡನೇ ತ್ರೈಮಾಸಿಕ ತೋಟಗಾರಿಕೆ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ತೋಟಗಾರಿಕೆ ಇಲಾಖೆಯ ವತಿಯಿಂದ ರೈತರಿಗಾಗಿ ಅನೇಕ ಯೋಜನೆಗಳನ್ನು, ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅದರ ಬಗ್ಗೆಯೂ ರೈತರಿಗೆ ಮಾಹಿತಿ ಒದಗಿಸಬಹುದು ಎಂದರು.</p>.<p>ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದ ವಿಸ್ತರಣಾ ಮುಂದಾಳು ವಿ.ಪಿ. ಸಿಂಗ್ ಮಾತನಾಡಿ, ಮುಂದೆ ನಡೆಯಲಿರುವ ತೋಟಗಾರಿಕೆ ಮೇಳದಲ್ಲಿ ಶ್ರೇಷ್ಠ ರೈತ/ರೈತ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಕೆ ಕುರಿತು ರೈತರಿಗೆ ಮಾಹಿತಿ ಒದಗಿಸಬೇಕು. ಫೆಬ್ರುವರಿ 10ರಿಂದ 12ರ ವರೆಗೆ ರೈತರಿಗೆ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಗುತ್ತದೆ. ಅದರ ಬಗ್ಗೆಯೂ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.</p>.<p>ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸೋಮನಾಥ ಘಾಳೆ, ಹಿರಿಯ ಸಹಾಯಕ ಸುನೀಲ ಗಂಗಶ್ರೀ, ಸಹಾಯಕ ಪ್ರಾಧ್ಯಾಪಕರಾದ ದುಷ್ಯಂತ ಓಲೇಕರ, ಪ್ರಶಾಂತ, ಜಿಲ್ಲೆಯ 46 ಸಹಾಯಕ ತೋಟಗಾರಿಕೆ ಅಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>