<p><strong>ಹುಲಸೂರ:</strong> ಪಟ್ಟಣದಲ್ಲಿ ಬುಧವಾರ ಬಿರುಗಾಳಿ ಸಹಿತ ಸುರಿದ ಮಳೆಯ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಎಂಟು ವರ್ಷದ ಬಾಲಕ ಮೃತಪಟ್ಟಿದ್ದಾನೆ.</p>.<p>ಪಟ್ಟಣದ ಮೊಮೀನ್ ಮೊಹಲ್ಲಾ ವಾರ್ಡ್ ಸಂಖ್ಯೆ–3ರ ನಿವಾಸಿ ಅರ್ಷದ್ ಅಲಿ ಮೊಮೀನ ಪುತ್ರ ಅಲಿ ಮೊಮೀನ್ (8) ಮೃತ ಬಾಲಕ. ಮಳೆಯ ಸಂದರ್ಭ ವಿದ್ಯುತ್ ತಂತಿ ತಗುಲಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.</p>.<p>ಘಟನೆಯ ನಂತರ ಬಾಲಕನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತಾದರೂ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದರು.</p>.<p>ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಶಿವಾನಂದ ಮೆತ್ರೆ, ದುರ್ಘಟನೆಯ ಕುರಿತು ಸಂತಾಪ ವ್ಯಕ್ತಪಡಿಸಿದರು. ಮೃತ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ ದೊರೆಯುವ ಪರಿಹಾರ ಮತ್ತು ನೆರವು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>.<p>ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗಣಪತಿ ಮೈನಾಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲಾಖೆಯಿಂದ ಲಭ್ಯವಿರುವ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.</p>.<p>ತಾ. ಪಂ. ಇಒ ಮಹಾದೇವ ಜಮ್ಮು, ಸಿಪಿಐ ಅಲಿಸಾಬ್, ಕಂದಾಯ ನಿರೀಕ್ಷಕ ಶರಣು ಪವಡಶೆಟ್ಟಿ ಹಾಗೂ ವೈದ್ಯಾಧಿಕಾರಿ ಶಶಿಕಾಂತ ಕನಡೆ ಉಪಸ್ಥಿತರಿದ್ದರು.</p>.<p>ಈ ಸಂಬಂಧ ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-33-1493373746</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ:</strong> ಪಟ್ಟಣದಲ್ಲಿ ಬುಧವಾರ ಬಿರುಗಾಳಿ ಸಹಿತ ಸುರಿದ ಮಳೆಯ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಎಂಟು ವರ್ಷದ ಬಾಲಕ ಮೃತಪಟ್ಟಿದ್ದಾನೆ.</p>.<p>ಪಟ್ಟಣದ ಮೊಮೀನ್ ಮೊಹಲ್ಲಾ ವಾರ್ಡ್ ಸಂಖ್ಯೆ–3ರ ನಿವಾಸಿ ಅರ್ಷದ್ ಅಲಿ ಮೊಮೀನ ಪುತ್ರ ಅಲಿ ಮೊಮೀನ್ (8) ಮೃತ ಬಾಲಕ. ಮಳೆಯ ಸಂದರ್ಭ ವಿದ್ಯುತ್ ತಂತಿ ತಗುಲಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.</p>.<p>ಘಟನೆಯ ನಂತರ ಬಾಲಕನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತಾದರೂ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದರು.</p>.<p>ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಶಿವಾನಂದ ಮೆತ್ರೆ, ದುರ್ಘಟನೆಯ ಕುರಿತು ಸಂತಾಪ ವ್ಯಕ್ತಪಡಿಸಿದರು. ಮೃತ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ ದೊರೆಯುವ ಪರಿಹಾರ ಮತ್ತು ನೆರವು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>.<p>ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗಣಪತಿ ಮೈನಾಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲಾಖೆಯಿಂದ ಲಭ್ಯವಿರುವ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.</p>.<p>ತಾ. ಪಂ. ಇಒ ಮಹಾದೇವ ಜಮ್ಮು, ಸಿಪಿಐ ಅಲಿಸಾಬ್, ಕಂದಾಯ ನಿರೀಕ್ಷಕ ಶರಣು ಪವಡಶೆಟ್ಟಿ ಹಾಗೂ ವೈದ್ಯಾಧಿಕಾರಿ ಶಶಿಕಾಂತ ಕನಡೆ ಉಪಸ್ಥಿತರಿದ್ದರು.</p>.<p>ಈ ಸಂಬಂಧ ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-33-1493373746</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>