ನೆರೆ ರಾಜ್ಯದ ಲಾತುರ್, ಉಸ್ಮಾನಾಬಾದ, ಬಿಡ, ಸೋಲಾಪುರ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆ ಬತ್ತಿ ಹೋಗಿದ್ದ ಮಾಂಜ್ರಾ ನದಿಯಲ್ಲಿ ನೀರಿನ ಶೇಖರಣಾ ಪ್ರಮಾಣ ಹೆಚ್ಚಾಗಿದೆ. ಹವಾಮಾನದ ಇಲಾಖೆಯ ಸೂಚನೆಯಂತೆ ಇನ್ನು ಎರಡು ದಿನ ಹೆಚ್ಚಿನ ಮಳೆ ಸುರಿದರೆ, ನೀರಿನ ಹರಿವಿನ ಪ್ರಮಾಣ ಇನ್ನೆರಡು ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.