ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಜಮ್ಮು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಮಾತನಾಡಿ,‘ಕಲ್ಯಾಣಿ ಸ್ವಚ್ಛಗೊಳಿಸಬೇಕು ಎನ್ನುವುದು ಸ್ಥಳೀಯರ ಬಹುದಿನದ ಬೇಡಿಕೆಯಾಗಿತ್ತು. ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಪಡೆದು ಕಲ್ಯಾಣಿ ಜೀರ್ಣೊದ್ಧಾರ ಕಾರ್ಯವನ್ನು ಆರಂಭಿಸಲಾಗಿದೆ. ಇದು ಹೂಳೆತ್ತುವುದು, ಸ್ವಚ್ಛತೆ ಹಾಗೂ ಸೌಂದರ್ಯಿಕರಣ, ಬೇಲಿ ಅಳವಡಿಕೆಯನ್ನೂ ಒಳಗೊಂಡಿದೆ. ಕಲ್ಯಾಣಿ ಅಭಿವೃದ್ಧಿಯಿಂದ ಅಂತರ್ಜಲ ಮಟ್ಟ ಹೆಚ್ಚಳ, ಸುತ್ತಲಿನ ಪ್ರದೇಶದಲ್ಲಿ ಉತ್ತಮ ವಾತಾವರಣ ಸೃಷ್ಟಿಯಾಗುತ್ತದೆ’ ಎಂದು ಹೇಳಿದರು.