<p><strong>ಹುಲಸೂರ:</strong> ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಆರಾಧ್ಯ ದೈವ ಶ್ರೀರಾಮಚಂದ್ರನ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪಿಯನ್ನು ತಕ್ಷಣ ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮೆಹಕರ ಗ್ರಾಮದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಸುಮಾರು ಎರಡು ಗಂಟೆಗಳ ಕಾಲ ಮೆಹಕರ-ಭಾಲ್ಕಿ ರಸ್ತೆ ತಡೆದು ಆಕ್ರೋಶ ಹೊರ ಹಾಕಿದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಘಟನೆಗಳನ್ನು ಸಹಿಸಿಕೊಳ್ಳುವುದಿಲ್ಲ. ಆರೋಪಿಯನ್ನು ಎರಡು ದಿನಗಳಲ್ಲಿ ಬಂಧಿಸದಿದ್ದಲ್ಲಿ ಕೆಸರ ಜವಳಗಾ ಬಳಿಯ ರಾಷ್ಟ್ರೀಯ ಹೆದ್ದಾರಿ ತಡೆದು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನೆಗೆ ಬೆಂಬಲ ಸೂಚಿಸಿ ಗ್ರಾಮದಲ್ಲಿನ ಅಂಗಡಿ ಮುಂಗಟ್ಟುಗಳನ್ನು ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಸಹಕಾರ ನೀಡಿದರು.</p>.<p>ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಬರೆದ ಪತ್ರವನ್ನು ಪ್ರತಿಭಟನಾಕಾರರು ಉಪ ತಹಶೀಲ್ದಾರ್ ಸಂಜೀವಕುಮಾರ ಭೈರೆ ಅವರಿಗೆ ಸಲ್ಲಿಸಿದರು.</p>.<p>‘ಸಾಮಾಜಿಕ ಸೌಹಾರ್ದ ಕದಡುವ ಹೇಳಿಕೆಗಳಿಗೆ ಅವಕಾಶ ನೀಡಬಾರದು ಹಾಗೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ಕ್ರಮ ಕೈಗೊಳ್ಳಬೇಕು’ ಎಂದು ಮನವಿಯಲ್ಲಿ ಆಗ್ರಹಿಸಿದರು.</p>.<p>ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ವಿಡಿಯೊದ ನೈಜತೆ ಸೇರಿದಂತೆ ಘಟನೆಯ ವಿವರಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಪೊಲೀಸರು ಮನವಿ ಮಾಡಿದರು.</p>.<p>ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು. ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಒದಗಿಸಿದ್ದರು.</p>.<p>ಪ್ರಮುಖರಾದ ಶಿವರಾಜ ತೋರಣೆ, ವೆಂಕಟ ಲಾಳೆ, ಅಣ್ಣರಾವ ಹಾಲಸೆ, ಭರತ ಪಾಟೀಲ, ಮಾರುತಿ ಲೋನೆ , ಪ್ರತಾಪ್ ಮೊರೆ, ಶಿವಾಜಿ ದೇಶಮುಖ್, ಜ್ಞಾನಬಾ ಮಲ್ಕಾಪುರೆ , ಕೈಲಾಸ್ ರೊಳೆ, ಸತ್ಯವಾನ್ ಕಾಂಬಳೆ, ಸಂಜೀವ ದುರ್ಗಾಳೆ, ರಾಹುಲ ಹಡಬೆ, ದತ್ತಾತ್ರಿ ಸೇರಿದಂತೆ ಹಲವರಿದ್ದರು.</p>.<div><blockquote>ಸಾಮಾಜಿಕ ಸೌಹಾರ್ದ ಕಾಪಾಡುವುದು ಎಲ್ಲರ ಹೊಣೆ. ಕಾನೂನು ಕ್ರಮದ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು </blockquote><span class="attribution">ನವನಾಥ ಪಾಟೀಲ ಹಿಂದೂ ಸಂಘಟನೆ ಮುಖಂಡ </span></div>.<div><blockquote>ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು </blockquote><span class="attribution">ಅಶೋಕ ಪಾಟೀಲ ಗ್ರಾಮದ ಮುಖಂಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ:</strong> ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಆರಾಧ್ಯ ದೈವ ಶ್ರೀರಾಮಚಂದ್ರನ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪಿಯನ್ನು ತಕ್ಷಣ ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮೆಹಕರ ಗ್ರಾಮದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಸುಮಾರು ಎರಡು ಗಂಟೆಗಳ ಕಾಲ ಮೆಹಕರ-ಭಾಲ್ಕಿ ರಸ್ತೆ ತಡೆದು ಆಕ್ರೋಶ ಹೊರ ಹಾಕಿದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಘಟನೆಗಳನ್ನು ಸಹಿಸಿಕೊಳ್ಳುವುದಿಲ್ಲ. ಆರೋಪಿಯನ್ನು ಎರಡು ದಿನಗಳಲ್ಲಿ ಬಂಧಿಸದಿದ್ದಲ್ಲಿ ಕೆಸರ ಜವಳಗಾ ಬಳಿಯ ರಾಷ್ಟ್ರೀಯ ಹೆದ್ದಾರಿ ತಡೆದು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನೆಗೆ ಬೆಂಬಲ ಸೂಚಿಸಿ ಗ್ರಾಮದಲ್ಲಿನ ಅಂಗಡಿ ಮುಂಗಟ್ಟುಗಳನ್ನು ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಸಹಕಾರ ನೀಡಿದರು.</p>.<p>ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಬರೆದ ಪತ್ರವನ್ನು ಪ್ರತಿಭಟನಾಕಾರರು ಉಪ ತಹಶೀಲ್ದಾರ್ ಸಂಜೀವಕುಮಾರ ಭೈರೆ ಅವರಿಗೆ ಸಲ್ಲಿಸಿದರು.</p>.<p>‘ಸಾಮಾಜಿಕ ಸೌಹಾರ್ದ ಕದಡುವ ಹೇಳಿಕೆಗಳಿಗೆ ಅವಕಾಶ ನೀಡಬಾರದು ಹಾಗೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ಕ್ರಮ ಕೈಗೊಳ್ಳಬೇಕು’ ಎಂದು ಮನವಿಯಲ್ಲಿ ಆಗ್ರಹಿಸಿದರು.</p>.<p>ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ವಿಡಿಯೊದ ನೈಜತೆ ಸೇರಿದಂತೆ ಘಟನೆಯ ವಿವರಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಪೊಲೀಸರು ಮನವಿ ಮಾಡಿದರು.</p>.<p>ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು. ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಒದಗಿಸಿದ್ದರು.</p>.<p>ಪ್ರಮುಖರಾದ ಶಿವರಾಜ ತೋರಣೆ, ವೆಂಕಟ ಲಾಳೆ, ಅಣ್ಣರಾವ ಹಾಲಸೆ, ಭರತ ಪಾಟೀಲ, ಮಾರುತಿ ಲೋನೆ , ಪ್ರತಾಪ್ ಮೊರೆ, ಶಿವಾಜಿ ದೇಶಮುಖ್, ಜ್ಞಾನಬಾ ಮಲ್ಕಾಪುರೆ , ಕೈಲಾಸ್ ರೊಳೆ, ಸತ್ಯವಾನ್ ಕಾಂಬಳೆ, ಸಂಜೀವ ದುರ್ಗಾಳೆ, ರಾಹುಲ ಹಡಬೆ, ದತ್ತಾತ್ರಿ ಸೇರಿದಂತೆ ಹಲವರಿದ್ದರು.</p>.<div><blockquote>ಸಾಮಾಜಿಕ ಸೌಹಾರ್ದ ಕಾಪಾಡುವುದು ಎಲ್ಲರ ಹೊಣೆ. ಕಾನೂನು ಕ್ರಮದ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು </blockquote><span class="attribution">ನವನಾಥ ಪಾಟೀಲ ಹಿಂದೂ ಸಂಘಟನೆ ಮುಖಂಡ </span></div>.<div><blockquote>ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು </blockquote><span class="attribution">ಅಶೋಕ ಪಾಟೀಲ ಗ್ರಾಮದ ಮುಖಂಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>