<p>ಹುಲಸೂರ : ‘ತಾಲ್ಲೂಕಿನ ಗೋರಟಾ (ಬಿ) ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಏಪ್ರಿಲ್ 2 ಮತ್ತು 3 ರಂದು ಜಗನ್ಮಾತೆ ಅಕ್ಕ ಮಹಾದೇವಿ ಜಯಂತೋತ್ಸವ ಹಾಗೂ ವಚನ ವಿಜಯೋತ್ಸವವನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ’ ಎಂದು ಮಠದ ಪೀಠಾಧಿಪತಿ ಪ್ರಭುದೇವ ಸ್ವಾಮೀಜಿ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಕನ ಜಯಂತ್ಯುತ್ಸವದ ಮೂಲಕ ಬಸವಾದಿ ಶರಣರ ಮಾನವೀಯ ಮೌಲ್ಯಗಳನ್ನು ಜನಮನದಲ್ಲಿ ಬಿತ್ತುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾರ್ಚ್ 25ರಿಂದ ಏಪ್ರಿಲ್ 1ರವರೆಗೆ ಎಂಟು ದಿನಗಳ ಕಾಲ ‘ಅಕ್ಕನ ದರ್ಶನ ಪ್ರವಚನ’ ನಡೆಯುತ್ತಿದೆ’ ಎಂದು ತಿಳಿಸಿದರು.</p>.<p>‘ಏಪ್ರಿಲ್ 2ರಂದು ಸಂಜೆ 6 ಗಂಟೆಗೆ ಅಕ್ಕನ ತೊಟ್ಟಿಲು ವಿಶೇಷ ಕಾರ್ಯಕ್ರಮ ನಡೆಯಲಿದೆ. ಬಳಿಕ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ಏಪ್ರಿಲ್ 3ರಂದು ಸಂಜೆ 4 ಗಂಟೆಗೆ ವಚನ ವಿಜಯೋತ್ಸವದ ಭವ್ಯ ಮೆರವಣಿಗೆ ನಡೆಯಲಿದೆ. ಅಲಂಕೃತ ವಾಹನದಲ್ಲಿ ವಿಶ್ವಗುರು ಬಸವಣ್ಣ ಹಾಗೂ ಮಹಾದೇವಿಯಕ್ಕನವರ ಭಾವಚಿತ್ರಗಳನ್ನು ಇರಿಸಿ ವಚನ ಸಾಹಿತ್ಯದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. ಸಂಜೆ 6 ಗಂಟೆಗೆ 770 ಸಮವಸ್ತ್ರಧಾರಿ ಶರಣ–ಶರಣೆಯರಿಂದ ಅಕ್ಕನ ಯೋಗಾಂಗ ತ್ರಿವಿಧಿ ಸಾಮೂಹಿಕ ಪಾರಾಯಣ ನಡೆಯಲಿದೆ. ನಂತರ ವಚನ ನೃತ್ಯರೂಪಕ ಪ್ರದರ್ಶನ ನಡೆಯಲಿದೆ’ ಎಂದರು.</p>.<p>‘ಅನುಭವ ಗೋಷ್ಠಿಗೆ ಬಸವಲಿಂಗ ಪಟ್ಟದ್ದೇವರು ಸೇರಿದಂತೆ ಅನೇಕ ಸ್ವಾಮೀಜಿಗಳು ಪಾಲ್ಗೊಳುವವರು. ಅಲ್ಲದೆ ಸಚಿವ ಈಶ್ವರ ಬಿ. ಖಂಡ್ರೆ, ಶಾಸಕ ಶರಣು ಸಲಗರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುವವರು’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-33-1575474661</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಲಸೂರ : ‘ತಾಲ್ಲೂಕಿನ ಗೋರಟಾ (ಬಿ) ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಏಪ್ರಿಲ್ 2 ಮತ್ತು 3 ರಂದು ಜಗನ್ಮಾತೆ ಅಕ್ಕ ಮಹಾದೇವಿ ಜಯಂತೋತ್ಸವ ಹಾಗೂ ವಚನ ವಿಜಯೋತ್ಸವವನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ’ ಎಂದು ಮಠದ ಪೀಠಾಧಿಪತಿ ಪ್ರಭುದೇವ ಸ್ವಾಮೀಜಿ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಕನ ಜಯಂತ್ಯುತ್ಸವದ ಮೂಲಕ ಬಸವಾದಿ ಶರಣರ ಮಾನವೀಯ ಮೌಲ್ಯಗಳನ್ನು ಜನಮನದಲ್ಲಿ ಬಿತ್ತುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾರ್ಚ್ 25ರಿಂದ ಏಪ್ರಿಲ್ 1ರವರೆಗೆ ಎಂಟು ದಿನಗಳ ಕಾಲ ‘ಅಕ್ಕನ ದರ್ಶನ ಪ್ರವಚನ’ ನಡೆಯುತ್ತಿದೆ’ ಎಂದು ತಿಳಿಸಿದರು.</p>.<p>‘ಏಪ್ರಿಲ್ 2ರಂದು ಸಂಜೆ 6 ಗಂಟೆಗೆ ಅಕ್ಕನ ತೊಟ್ಟಿಲು ವಿಶೇಷ ಕಾರ್ಯಕ್ರಮ ನಡೆಯಲಿದೆ. ಬಳಿಕ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ಏಪ್ರಿಲ್ 3ರಂದು ಸಂಜೆ 4 ಗಂಟೆಗೆ ವಚನ ವಿಜಯೋತ್ಸವದ ಭವ್ಯ ಮೆರವಣಿಗೆ ನಡೆಯಲಿದೆ. ಅಲಂಕೃತ ವಾಹನದಲ್ಲಿ ವಿಶ್ವಗುರು ಬಸವಣ್ಣ ಹಾಗೂ ಮಹಾದೇವಿಯಕ್ಕನವರ ಭಾವಚಿತ್ರಗಳನ್ನು ಇರಿಸಿ ವಚನ ಸಾಹಿತ್ಯದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. ಸಂಜೆ 6 ಗಂಟೆಗೆ 770 ಸಮವಸ್ತ್ರಧಾರಿ ಶರಣ–ಶರಣೆಯರಿಂದ ಅಕ್ಕನ ಯೋಗಾಂಗ ತ್ರಿವಿಧಿ ಸಾಮೂಹಿಕ ಪಾರಾಯಣ ನಡೆಯಲಿದೆ. ನಂತರ ವಚನ ನೃತ್ಯರೂಪಕ ಪ್ರದರ್ಶನ ನಡೆಯಲಿದೆ’ ಎಂದರು.</p>.<p>‘ಅನುಭವ ಗೋಷ್ಠಿಗೆ ಬಸವಲಿಂಗ ಪಟ್ಟದ್ದೇವರು ಸೇರಿದಂತೆ ಅನೇಕ ಸ್ವಾಮೀಜಿಗಳು ಪಾಲ್ಗೊಳುವವರು. ಅಲ್ಲದೆ ಸಚಿವ ಈಶ್ವರ ಬಿ. ಖಂಡ್ರೆ, ಶಾಸಕ ಶರಣು ಸಲಗರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುವವರು’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-33-1575474661</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>