<p>ಹುಲಸೂರ: ತಾಲ್ಲೂಕಿನ ಬೇಲೂರು ಗ್ರಾಮದಲ್ಲಿ ನಡೆಯುತ್ತಿರುವ ಸಿದ್ದರಾಮೇಶ್ವರ ದೇವಾಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಅಳವಡಿಸಿದ್ದ ಶರಣರ ಭಾವಚಿತ್ರಗಳಿರುವ ಬ್ಯಾನರ್ಗಳನ್ನು ಕಿಡಿಗೇಡಿಗಳು ಹರಿದ ಘಟನೆಗೆ ಬಸವಾಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಶತಮಾನ ಗಳಿಂದ ಆಚರಿಸಲಾಗುತ್ತಿರುವ ಈ ಜಾತ್ರಾ ಮಹೋತ್ಸವದ ನಿಮಿತ್ತ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, 15 ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಬಸವಣ್ಣ ಹಾಗೂ ಸಿದ್ದರಾಮೇಶ್ವರರ ಭಾವಚಿತ್ರಗಳಿರುವ ಸುಮಾರು 50ರಿಂದ 60 ಬ್ಯಾನರ್ಗಳನ್ನು ಗ್ರಾಮದೆಲ್ಲೆಡೆ ಅಳವಡಿಸಲಾಗಿತ್ತು.</p>.<p>ಗುರುವಾರ ಬೆಳಗಿನ ಜಾವ ಕೆಲ ಕಿಡಿಗೇಡಿಗಳು ಈ ಬ್ಯಾನರ್ಗಳನ್ನು ಹರಿದು ವಿರೂಪಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಇದೇ ರೀತಿಯ ಘಟನೆಗಳು ಕಳೆದ ಎರಡು-ಮೂರು ವರ್ಷಗಳಿಂದ ಮರುಕಳಿಸುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.</p>.<p>ಘಟನೆಯನ್ನು ಖಂಡಿಸಿ ಸಾವಿರಾರು ಭಕ್ತರು ಶರಣರ ಭಾವಚಿತ್ರಗಳಿರುವ ಧ್ವಜಗಳನ್ನು ಹಿಡಿದು ಗ್ರಾಮದಲ್ಲಿನ ಓಣಿಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ ಮೆಂಡೋಳೆ, ಸದಸ್ಯರು ಹಾಗೂ ಗ್ರಾಮಸ್ಥರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<p>ವಿವಾದ ಹಿನ್ನೆಲೆ : ಸಿದ್ದರಾಮೇಶ್ವರರು 12ನೇ ಶತಮಾನದ ಶರಣರೆಂಬ ಅಭಿಪ್ರಾಯವನ್ನು ದೇವಸ್ಥಾನ ಸಮಿತಿ ಹಾಗೂ ಬಹುತೇಕ ಗ್ರಾಮಸ್ಥರು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕೆಲವರು ಅವರು ಶರಣರಲ್ಲ, ರೇವಣ್ಣಸಿದ್ದೇಶ್ವರ ಎಂದು ವಾದಿಸುತ್ತಿರುವುದೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.</p>.<p>ಕಳೆದ ವರ್ಷದ ಜಾತ್ರಾ ಮಹೋತ್ಸವದಲ್ಲಿಹಾರಕೂಡ ಹೀರೆಮಠ ಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡುವ ಸಂದರ್ಭದಲ್ಲಿ, ಬೇಲೂರು ಗ್ರಾಮದ ಕೆರೆ ಪಕ್ಕದಲ್ಲಿರುವ ದೇವಸ್ಥಾನವು 12ನೇ ಶತಮಾನದ ಸೊನ್ನಲಿಗೆಯ ಸಿದ್ದರಾಮರದ್ದೇ ಎಂದು ಸ್ಪಷ್ಟಪಡಿಸಿದ್ದರು ಎಂದು ಭಕ್ತರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಒಂದಾಗಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-33-505686186</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಲಸೂರ: ತಾಲ್ಲೂಕಿನ ಬೇಲೂರು ಗ್ರಾಮದಲ್ಲಿ ನಡೆಯುತ್ತಿರುವ ಸಿದ್ದರಾಮೇಶ್ವರ ದೇವಾಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಅಳವಡಿಸಿದ್ದ ಶರಣರ ಭಾವಚಿತ್ರಗಳಿರುವ ಬ್ಯಾನರ್ಗಳನ್ನು ಕಿಡಿಗೇಡಿಗಳು ಹರಿದ ಘಟನೆಗೆ ಬಸವಾಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಶತಮಾನ ಗಳಿಂದ ಆಚರಿಸಲಾಗುತ್ತಿರುವ ಈ ಜಾತ್ರಾ ಮಹೋತ್ಸವದ ನಿಮಿತ್ತ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, 15 ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಬಸವಣ್ಣ ಹಾಗೂ ಸಿದ್ದರಾಮೇಶ್ವರರ ಭಾವಚಿತ್ರಗಳಿರುವ ಸುಮಾರು 50ರಿಂದ 60 ಬ್ಯಾನರ್ಗಳನ್ನು ಗ್ರಾಮದೆಲ್ಲೆಡೆ ಅಳವಡಿಸಲಾಗಿತ್ತು.</p>.<p>ಗುರುವಾರ ಬೆಳಗಿನ ಜಾವ ಕೆಲ ಕಿಡಿಗೇಡಿಗಳು ಈ ಬ್ಯಾನರ್ಗಳನ್ನು ಹರಿದು ವಿರೂಪಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಇದೇ ರೀತಿಯ ಘಟನೆಗಳು ಕಳೆದ ಎರಡು-ಮೂರು ವರ್ಷಗಳಿಂದ ಮರುಕಳಿಸುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.</p>.<p>ಘಟನೆಯನ್ನು ಖಂಡಿಸಿ ಸಾವಿರಾರು ಭಕ್ತರು ಶರಣರ ಭಾವಚಿತ್ರಗಳಿರುವ ಧ್ವಜಗಳನ್ನು ಹಿಡಿದು ಗ್ರಾಮದಲ್ಲಿನ ಓಣಿಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ ಮೆಂಡೋಳೆ, ಸದಸ್ಯರು ಹಾಗೂ ಗ್ರಾಮಸ್ಥರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<p>ವಿವಾದ ಹಿನ್ನೆಲೆ : ಸಿದ್ದರಾಮೇಶ್ವರರು 12ನೇ ಶತಮಾನದ ಶರಣರೆಂಬ ಅಭಿಪ್ರಾಯವನ್ನು ದೇವಸ್ಥಾನ ಸಮಿತಿ ಹಾಗೂ ಬಹುತೇಕ ಗ್ರಾಮಸ್ಥರು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕೆಲವರು ಅವರು ಶರಣರಲ್ಲ, ರೇವಣ್ಣಸಿದ್ದೇಶ್ವರ ಎಂದು ವಾದಿಸುತ್ತಿರುವುದೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.</p>.<p>ಕಳೆದ ವರ್ಷದ ಜಾತ್ರಾ ಮಹೋತ್ಸವದಲ್ಲಿಹಾರಕೂಡ ಹೀರೆಮಠ ಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡುವ ಸಂದರ್ಭದಲ್ಲಿ, ಬೇಲೂರು ಗ್ರಾಮದ ಕೆರೆ ಪಕ್ಕದಲ್ಲಿರುವ ದೇವಸ್ಥಾನವು 12ನೇ ಶತಮಾನದ ಸೊನ್ನಲಿಗೆಯ ಸಿದ್ದರಾಮರದ್ದೇ ಎಂದು ಸ್ಪಷ್ಟಪಡಿಸಿದ್ದರು ಎಂದು ಭಕ್ತರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಒಂದಾಗಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-33-505686186</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>