<p>ಹುಲಸೂರ: ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನಿರ್ಮಿಸಿದ್ದ ಸೌರ ಹೈಮಾಸ್ಟ್ ಕಂಬ ನೆಲಕ್ಕುರುಳಿದೆ.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ ಅಂದಾಜು ₹29.09 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದ ಹೈಮಾಸ್ಟ್ ಕಂಬ ಬಿರುಗಾಳಿ ಮಳೆಗೆ ನೆಲಕ್ಕುರುಳಿದ್ದು, ವಿದ್ಯುತ್ ತಂತಿಯ ಮೇಲೆಯೇ ಬಿದ್ದಿದೆ. ಜನ ಸಂಚಾರ ಕಡಿಮೆ ಇರುವ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ.</p>.<p>ಇನ್ನು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನಿರ್ಮಿಸಲಾದ ಸೌರ ಹೈಮಾಸ್ಟ್ ಕಂಬವೂ ಕೂಡ ಅದೇ ರೀತಿಯಲ್ಲಿ ಕುಸಿದಿರುವುದು ಬೆಳಕಿಗೆ ಬಂದಿದೆ. ಶಾಲೆ ರಜೆ ಇರುವುದರಿಂದ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿರಲಿಲ್ಲ.</p>.<p>ಆಸ್ಪತ್ರೆ ಆವರಣದಲ್ಲಿನ ಕಂಬ ಬಿದ್ದ ಪರಿಣಾಮ ದುರ್ಗಾ ನಗರ ಹಾಗೂ ಶಿವಾಜಿ ವೃತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು. ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಬಾಣಂತಿಯರು ಹಾಗೂ ಹೆರಿಗೆ ರೋಗಿಗಳು ಕುಡಿಯುವ ನೀರಿನ ಸಮಸ್ಯೆ ಉಂಟಾಯಿತು.</p>.<p>ಜೆಸ್ಕಾಂ ಉಪವಿಭಾಗ ಕಚೇರಿ ಹಾಗೂ ಗ್ರಾಮ ಪಂಚಾಯಿತಿ ಪಿಡಿಒ ಅವರಿಗೆ ದುರಸ್ತಿ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದಾಗ ಸಮರ್ಪಕ ಸ್ಪಂದನೆ ದೊರಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಇತ್ತೀಚಿನ ಗಾಳಿ–ಮಳೆಯ ನಡುವೆ ಹೈಮಾಸ್ಟ್ ಕಂಬಗಳು ಕುಸಿದಿರುವುದು ಕಾಮಗಾರಿಗಳ ಗುಣಮಟ್ಟ ಮತ್ತು ತಾಂತ್ರಿಕ ಅಂಶಗಳ ಬಗ್ಗೆ ಸಾರ್ವಜನಿಕರಿಂದ ಅನುಮಾನ ವ್ಯಕ್ತವಾಗುತ್ತಿದೆ.</p>.<p>ಘಟನೆ ಬಳಿಕ ಸಂಬಂಧಿತ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿಗೊಳಗಾದ ಕಂಬಗಳನ್ನು ತೆರವುಗೊಳಿಸುವ ಕಾರ್ಯ ಪ್ರಾರಂಭಗೊಂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-33-1359092494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಲಸೂರ: ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನಿರ್ಮಿಸಿದ್ದ ಸೌರ ಹೈಮಾಸ್ಟ್ ಕಂಬ ನೆಲಕ್ಕುರುಳಿದೆ.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ ಅಂದಾಜು ₹29.09 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದ ಹೈಮಾಸ್ಟ್ ಕಂಬ ಬಿರುಗಾಳಿ ಮಳೆಗೆ ನೆಲಕ್ಕುರುಳಿದ್ದು, ವಿದ್ಯುತ್ ತಂತಿಯ ಮೇಲೆಯೇ ಬಿದ್ದಿದೆ. ಜನ ಸಂಚಾರ ಕಡಿಮೆ ಇರುವ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ.</p>.<p>ಇನ್ನು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನಿರ್ಮಿಸಲಾದ ಸೌರ ಹೈಮಾಸ್ಟ್ ಕಂಬವೂ ಕೂಡ ಅದೇ ರೀತಿಯಲ್ಲಿ ಕುಸಿದಿರುವುದು ಬೆಳಕಿಗೆ ಬಂದಿದೆ. ಶಾಲೆ ರಜೆ ಇರುವುದರಿಂದ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿರಲಿಲ್ಲ.</p>.<p>ಆಸ್ಪತ್ರೆ ಆವರಣದಲ್ಲಿನ ಕಂಬ ಬಿದ್ದ ಪರಿಣಾಮ ದುರ್ಗಾ ನಗರ ಹಾಗೂ ಶಿವಾಜಿ ವೃತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು. ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಬಾಣಂತಿಯರು ಹಾಗೂ ಹೆರಿಗೆ ರೋಗಿಗಳು ಕುಡಿಯುವ ನೀರಿನ ಸಮಸ್ಯೆ ಉಂಟಾಯಿತು.</p>.<p>ಜೆಸ್ಕಾಂ ಉಪವಿಭಾಗ ಕಚೇರಿ ಹಾಗೂ ಗ್ರಾಮ ಪಂಚಾಯಿತಿ ಪಿಡಿಒ ಅವರಿಗೆ ದುರಸ್ತಿ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದಾಗ ಸಮರ್ಪಕ ಸ್ಪಂದನೆ ದೊರಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಇತ್ತೀಚಿನ ಗಾಳಿ–ಮಳೆಯ ನಡುವೆ ಹೈಮಾಸ್ಟ್ ಕಂಬಗಳು ಕುಸಿದಿರುವುದು ಕಾಮಗಾರಿಗಳ ಗುಣಮಟ್ಟ ಮತ್ತು ತಾಂತ್ರಿಕ ಅಂಶಗಳ ಬಗ್ಗೆ ಸಾರ್ವಜನಿಕರಿಂದ ಅನುಮಾನ ವ್ಯಕ್ತವಾಗುತ್ತಿದೆ.</p>.<p>ಘಟನೆ ಬಳಿಕ ಸಂಬಂಧಿತ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿಗೊಳಗಾದ ಕಂಬಗಳನ್ನು ತೆರವುಗೊಳಿಸುವ ಕಾರ್ಯ ಪ್ರಾರಂಭಗೊಂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-33-1359092494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>