<p>ಹುಲಸೂರ: ಬೇಸಿಗೆ ಸಂದರ್ಭದಲ್ಲಿ ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಜಾಗರೂಕತೆ ವಹಿಸಬೇಕಾದ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಪಟ್ಟಣದ ಹಲವು ವಾರ್ಡ್ಗಳ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಪಟ್ಟಣದ 6, 7 ಮತ್ತು 8ನೇ ವಾರ್ಡ್ಗಳಲ್ಲಿ ಕಳೆದ ಕೆಲ ದಿನಗಳಿಂದ ಸಮರ್ಪಕವಾಗಿ ನೀರು ಸರಬರಾಜಾಗುತ್ತಿಲ್ಲ. ಹಲವೆಡೆ ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಕುಸಿದ ಪರಿಣಾಮ ನೀರಿನ ಕೊರತೆ ಉಂಟಾಗಿದ್ದು, ಪೈಪ್ಗಳನ್ನು ಇನ್ನಷ್ಟು ಕೆಳಕ್ಕೆ ಇಳಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>ಕೆಲವು ಕಡೆ ಮೋಟಾರ್ಗಳು ಕೆಟ್ಟು ದುರಸ್ತಿ ಆಗದೆ ಇರುವುದರಿಂದ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ ಎಂದು ದೂರಿದ್ದಾರೆ.</p>.<p>ವಾರ್ಡ್ ಸಂಖ್ಯೆ 8ರ ಬಸವಣ್ಣ ಕಟ್ಟೆ ಸಮೀಪ ಕಳೆದ 15 ದಿನಗಳಿಂದ ಮುಖ್ಯ ಪೈಪ್ ಒಡೆದು ನಿರಂತರವಾಗಿ ನೀರು ರಸ್ತೆ ಮೇಲೆ ಹರಿದು ಪೋಲಾಗುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಗಣೇಶ ಮಂದಿರ ಹಾಗೂ ಶಿವಾಜಿ ಮಹಾರಾಜರ ವೃತ್ತದ ಸಮೀಪವೂ ಮುಖ್ಯ ಪೈಪ್ ಹಾನಿಗೊಳಗಾಗಿದ್ದರೂ ದುರಸ್ತಿಗೆ ಆಸಕ್ತಿ ತೋರದ ಪಂಚಾಯಿತಿ, ನೀರು ಸರಬರಾಜು ಶುಲ್ಕ ವಸೂಲಿಗೆ ಮಾತ್ರ ಆದ್ಯತೆ ನೀಡುತ್ತಿದೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇದೇ ರೀತಿ ಬೇಜವಾಬ್ದಾರಿ ಮುಂದುವರಿದರೆ ಮಹಿಳೆಯರು ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಬೇಕಾಗುತ್ತದೆ ಎಂದು 6ನೇ ವಾರ್ಡ್ನ ಮಹಿಳೆಯರು ಎಚ್ಚರಿಕೆ ನೀಡಿದರು.</p>.<p>2023-24ನೇ ಸಾಲಿನಲ್ಲಿ ‘ಜಲೋತ್ಸವ ಮನೆ ಮನೆಗೆ ಗಂಗೆ’ ಯೋಜನೆಯಡಿ ಆರಂಭವಾದ ಕಾಮಗಾರಿಗೆ ಮೂರು ವರ್ಷ ಕಳೆದರೂ ಕಾಮಗಾರಿ ಕುಂಟುತ್ತಾ ಸಾಗುತ್ತಿದ್ದು, ಮನೆಮನೆಗೂ ನೀರು ಪೂರೈಕೆ ಆಗುವ ಲಕ್ಷಣ ಕಾಣಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-33-331181703</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಲಸೂರ: ಬೇಸಿಗೆ ಸಂದರ್ಭದಲ್ಲಿ ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಜಾಗರೂಕತೆ ವಹಿಸಬೇಕಾದ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಪಟ್ಟಣದ ಹಲವು ವಾರ್ಡ್ಗಳ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಪಟ್ಟಣದ 6, 7 ಮತ್ತು 8ನೇ ವಾರ್ಡ್ಗಳಲ್ಲಿ ಕಳೆದ ಕೆಲ ದಿನಗಳಿಂದ ಸಮರ್ಪಕವಾಗಿ ನೀರು ಸರಬರಾಜಾಗುತ್ತಿಲ್ಲ. ಹಲವೆಡೆ ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಕುಸಿದ ಪರಿಣಾಮ ನೀರಿನ ಕೊರತೆ ಉಂಟಾಗಿದ್ದು, ಪೈಪ್ಗಳನ್ನು ಇನ್ನಷ್ಟು ಕೆಳಕ್ಕೆ ಇಳಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>ಕೆಲವು ಕಡೆ ಮೋಟಾರ್ಗಳು ಕೆಟ್ಟು ದುರಸ್ತಿ ಆಗದೆ ಇರುವುದರಿಂದ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ ಎಂದು ದೂರಿದ್ದಾರೆ.</p>.<p>ವಾರ್ಡ್ ಸಂಖ್ಯೆ 8ರ ಬಸವಣ್ಣ ಕಟ್ಟೆ ಸಮೀಪ ಕಳೆದ 15 ದಿನಗಳಿಂದ ಮುಖ್ಯ ಪೈಪ್ ಒಡೆದು ನಿರಂತರವಾಗಿ ನೀರು ರಸ್ತೆ ಮೇಲೆ ಹರಿದು ಪೋಲಾಗುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಗಣೇಶ ಮಂದಿರ ಹಾಗೂ ಶಿವಾಜಿ ಮಹಾರಾಜರ ವೃತ್ತದ ಸಮೀಪವೂ ಮುಖ್ಯ ಪೈಪ್ ಹಾನಿಗೊಳಗಾಗಿದ್ದರೂ ದುರಸ್ತಿಗೆ ಆಸಕ್ತಿ ತೋರದ ಪಂಚಾಯಿತಿ, ನೀರು ಸರಬರಾಜು ಶುಲ್ಕ ವಸೂಲಿಗೆ ಮಾತ್ರ ಆದ್ಯತೆ ನೀಡುತ್ತಿದೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇದೇ ರೀತಿ ಬೇಜವಾಬ್ದಾರಿ ಮುಂದುವರಿದರೆ ಮಹಿಳೆಯರು ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಬೇಕಾಗುತ್ತದೆ ಎಂದು 6ನೇ ವಾರ್ಡ್ನ ಮಹಿಳೆಯರು ಎಚ್ಚರಿಕೆ ನೀಡಿದರು.</p>.<p>2023-24ನೇ ಸಾಲಿನಲ್ಲಿ ‘ಜಲೋತ್ಸವ ಮನೆ ಮನೆಗೆ ಗಂಗೆ’ ಯೋಜನೆಯಡಿ ಆರಂಭವಾದ ಕಾಮಗಾರಿಗೆ ಮೂರು ವರ್ಷ ಕಳೆದರೂ ಕಾಮಗಾರಿ ಕುಂಟುತ್ತಾ ಸಾಗುತ್ತಿದ್ದು, ಮನೆಮನೆಗೂ ನೀರು ಪೂರೈಕೆ ಆಗುವ ಲಕ್ಷಣ ಕಾಣಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-33-331181703</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>