<p><strong>ಬೀದರ್: </strong>ಮನವಿ ಸ್ವೀಕರಿಸಲು ಬರಲಿಲ್ಲ ಎಂದು ಆಕ್ರೋಶಗೊಂಡ ಪ್ರತಿಭಟನಾನಿರತ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು, ಶುಕ್ರವಾರ ಹುಮನಾಬಾದ್ ತಹಶೀಲ್ದಾರ್ ಕಚೇರಿಗೆ ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸಿದ್ದು, ತಹಶೀಲ್ದಾರ್ ಪ್ರದೀಪ್ ಹಿರೇಮಠ ಮೇಲೆ ಹಲ್ಲೆ ನಡೆಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿ ಬಿಎಸ್ಪಿ ರಾಜ್ಯ ಘಟಕದ ಕಾರ್ಯದರ್ಶಿ ಅಂಕುಶ್ ಗೋಖಲೆ ಹಾಗೂ ಅವರ ಬೆಂಬಲಿಗರನ್ನು ಹುಮನಾಬಾದ್ ಪೊಲೀಸರು ಬಂಧಿಸಿದ್ದಾರೆ.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಬಿಎಸ್ಪಿ ಕಾರ್ಯಕರ್ತರು, ಮನವಿಪತ್ರ ಸ್ವೀಕರಿಸಲು ಸ್ಥಳಕ್ಕೆ ಬರುವಂತೆ ತಹಶೀಲ್ದಾರರಿಗೆ ಮನವಿ ಮಾಡಿದರು.</p>.<p>‘ಆಯುಷ್ಮಾನ್ ಭಾರತ್ ಯೋಜನೆಯಡಿ ಆಹಾರ ಪೂರೈಕೆ ಮಾಡುವವಿತರಕರೊಂದಿಗೆ ಸಭೆ ನಡೆಸುತ್ತಿದ್ದೆ. ಅಂಕುಶ್ ಗೋಖಲೆ ಅವರು ಮನವಿಪತ್ರ ಸ್ವೀಕರಿಸುವಂತೆ ಬಂದಿದ್ದರು. ಸಭೆ ಮುಗಿದ ತಕ್ಷಣ ಮನವಿ ಸ್ವೀಕರಿಸುತ್ತೇನೆ.<br />ಐದು ನಿಮಿಷ ಕಾಯುವಂತೆ ಹೇಳಿದೆ.ಅವರು ಈಗಲೇ ತೆಗೆದುಕೊಳ್ಳುವಂತೆಒತ್ತಾಯಿಸಿದಾಗ ಗ್ರೇಡ್–2 ತಹಶೀಲ್ದಾರ್<br />ಬಳಿ ಕೊಡುವಂತೆ ಸೂಚಿಸಿದೆ. ಅಷ್ಟಕ್ಕೇ ಅವರು ಕಿರುಚಾಡುತ್ತ ನನ್ನತ್ತ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾಲಿನಿಂದ ಗುಪ್ತಾಂಗಕ್ಕೆ ಒದ್ದಿದ್ದಾರೆ. ಅವರ ಹಿಂಬಾಲಕರು ಅಂಗಿ ಹಿಡಿದು ಎಳೆದಾಡಿದ್ದಾರೆ’ ಎಂದು ತಹಶೀಲ್ದಾರ್ ದೂರು ನೀಡಿದ್ದಾರೆ. ಹಲ್ಲೆಯ ವಿಡಿಯೊ ವೈರಲ್ ಆಗಿದೆ.</p>.<p class="Subhead"><strong>ಸಿಬ್ಬಂದಿ ಪ್ರತಿಭಟನೆ:</strong> ತಹಶೀಲ್ದಾರ್ ಪ್ರದೀಪ್ ಹಿರೇಮಠ ಅವರು ಹುಮನಾಬಾದ್ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರು. ಹಲ್ಲೆ ಖಂಡಿಸಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p class="Subhead"><strong>ಬಂಧನ: </strong>ಬಿಎಸ್ಪಿ ರಾಜ್ಯ ಘಟಕದ ಕಾರ್ಯದರ್ಶಿ ಅಂಕುಶ್ ಗೋಖಲೆ, ಮುಜಿದ್ ಪಟೇಲ್, ರಾಜಕುಮಾರ ಶಿಂಧೆ, ದೇವೇಂದ್ರ, ದತ್ತಾತ್ತೇಯ ಅವರನ್ನು ಹುಮನಾಬಾದ್ ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಶೋಧ ನಡೆದಿದೆಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಮನವಿ ಸ್ವೀಕರಿಸಲು ಬರಲಿಲ್ಲ ಎಂದು ಆಕ್ರೋಶಗೊಂಡ ಪ್ರತಿಭಟನಾನಿರತ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು, ಶುಕ್ರವಾರ ಹುಮನಾಬಾದ್ ತಹಶೀಲ್ದಾರ್ ಕಚೇರಿಗೆ ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸಿದ್ದು, ತಹಶೀಲ್ದಾರ್ ಪ್ರದೀಪ್ ಹಿರೇಮಠ ಮೇಲೆ ಹಲ್ಲೆ ನಡೆಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿ ಬಿಎಸ್ಪಿ ರಾಜ್ಯ ಘಟಕದ ಕಾರ್ಯದರ್ಶಿ ಅಂಕುಶ್ ಗೋಖಲೆ ಹಾಗೂ ಅವರ ಬೆಂಬಲಿಗರನ್ನು ಹುಮನಾಬಾದ್ ಪೊಲೀಸರು ಬಂಧಿಸಿದ್ದಾರೆ.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಬಿಎಸ್ಪಿ ಕಾರ್ಯಕರ್ತರು, ಮನವಿಪತ್ರ ಸ್ವೀಕರಿಸಲು ಸ್ಥಳಕ್ಕೆ ಬರುವಂತೆ ತಹಶೀಲ್ದಾರರಿಗೆ ಮನವಿ ಮಾಡಿದರು.</p>.<p>‘ಆಯುಷ್ಮಾನ್ ಭಾರತ್ ಯೋಜನೆಯಡಿ ಆಹಾರ ಪೂರೈಕೆ ಮಾಡುವವಿತರಕರೊಂದಿಗೆ ಸಭೆ ನಡೆಸುತ್ತಿದ್ದೆ. ಅಂಕುಶ್ ಗೋಖಲೆ ಅವರು ಮನವಿಪತ್ರ ಸ್ವೀಕರಿಸುವಂತೆ ಬಂದಿದ್ದರು. ಸಭೆ ಮುಗಿದ ತಕ್ಷಣ ಮನವಿ ಸ್ವೀಕರಿಸುತ್ತೇನೆ.<br />ಐದು ನಿಮಿಷ ಕಾಯುವಂತೆ ಹೇಳಿದೆ.ಅವರು ಈಗಲೇ ತೆಗೆದುಕೊಳ್ಳುವಂತೆಒತ್ತಾಯಿಸಿದಾಗ ಗ್ರೇಡ್–2 ತಹಶೀಲ್ದಾರ್<br />ಬಳಿ ಕೊಡುವಂತೆ ಸೂಚಿಸಿದೆ. ಅಷ್ಟಕ್ಕೇ ಅವರು ಕಿರುಚಾಡುತ್ತ ನನ್ನತ್ತ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾಲಿನಿಂದ ಗುಪ್ತಾಂಗಕ್ಕೆ ಒದ್ದಿದ್ದಾರೆ. ಅವರ ಹಿಂಬಾಲಕರು ಅಂಗಿ ಹಿಡಿದು ಎಳೆದಾಡಿದ್ದಾರೆ’ ಎಂದು ತಹಶೀಲ್ದಾರ್ ದೂರು ನೀಡಿದ್ದಾರೆ. ಹಲ್ಲೆಯ ವಿಡಿಯೊ ವೈರಲ್ ಆಗಿದೆ.</p>.<p class="Subhead"><strong>ಸಿಬ್ಬಂದಿ ಪ್ರತಿಭಟನೆ:</strong> ತಹಶೀಲ್ದಾರ್ ಪ್ರದೀಪ್ ಹಿರೇಮಠ ಅವರು ಹುಮನಾಬಾದ್ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರು. ಹಲ್ಲೆ ಖಂಡಿಸಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p class="Subhead"><strong>ಬಂಧನ: </strong>ಬಿಎಸ್ಪಿ ರಾಜ್ಯ ಘಟಕದ ಕಾರ್ಯದರ್ಶಿ ಅಂಕುಶ್ ಗೋಖಲೆ, ಮುಜಿದ್ ಪಟೇಲ್, ರಾಜಕುಮಾರ ಶಿಂಧೆ, ದೇವೇಂದ್ರ, ದತ್ತಾತ್ತೇಯ ಅವರನ್ನು ಹುಮನಾಬಾದ್ ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಶೋಧ ನಡೆದಿದೆಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>