<p><strong>ಹುಮನಾಬಾದ್: ‘</strong>ವಿಜ್ಞಾನ ಮತ್ತು ಕಲಾ ವಸ್ತುಪ್ರದರ್ಶನ ಮಕ್ಕಳಲ್ಲಿನ ನಿಜವಾದ ಪ್ರತಿಭೆ ಹೊರತರಲು ಸಹಕಾರಿ ಆಗಿದೆ’ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಹಳ್ಳಿಖೇಡ್ ಬಿ.ಪಟ್ಟಣದ ಆರ್.ಜೆ. ಹಿಬಾರೆ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ಆಯೋಜಿಸಿದ್ದ ವಿಜ್ಞಾನ ಮತ್ತು ಕಲಾವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿಜ್ಞಾನಕ್ಕೆ ಸಂಬಂಧಿಸಿದ ನೂತನ ಮಾದರಿಗಳನ್ನು ಮಕ್ಕಳು ಮಾಡುವುದರಿಂದ ವೈಜ್ಞಾನಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಯಾವುದೇ ಸಂದೇಹವಿಲ್ಲ’ ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ನಾಗರಾಜ ಹಿಬಾರೆ ಮಾತನಾಡಿ, ‘ವಸ್ತುಪ್ರದರ್ಶನದಿಂದ ಮಕ್ಕಳಲ್ಲಿನ ನೈಜತೆ, ಕ್ರಿಯಾತ್ಮಕ ಚಟುವಟಿಕೆ, ಸುಪ್ತವಾದ ಪ್ರತಿಭೆ ಅರಳುತ್ತದೆ’ ಎಂದರು.</p>.<p>ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನದಲ್ಲಿ 500ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಸ್ತು ಪ್ರದರ್ಶನದಲ್ಲಿ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಐತಿಹಾಸಿಕ ಮತ್ತು ಭೌಗೋಳಿಕ ಹಾಗೂ ವೈಜ್ಞಾನಿಕ ಮಾದರಿಗಳು ಇದ್ದವು. ಬೇರೆ ಶಾಲೆಯಿಂದ ವಿದ್ಯಾರ್ಥಿಗಳು, ಪಾಲಕರು, ಸಾರ್ವಜನಿಕರು ಆಗಮಿಸಿ ಮಾದರಿಗಳನ್ನು ವೀಕ್ಷಿಸಿದರು.</p>.<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೇಶವರಾವ ತಳಘಟಕರ್, ರಾಹುಲ ಮಿಶ್ರಾ, ಸಂಸ್ಥೆಯ ಕಾರ್ಯದರ್ಶಿ ರುಚಿತಾ ನಾಗರಾಜ ಹಿಬಾರೆ, ಪುರಸಭೆ ಸದಸ್ಯ ಯುಸುಫ್ ಸೌದಾಗರ್, ಭೀಮರಾವ ನಾಯಕ್ , ಕೆ.ಶಿಲ್ಪಾವತಿ,</p>.<p>ಅಬ್ದುಲ್ ರಜಾಕ್, ಅಶೋಕ ಬಾವಗಿ, ಶಿವರಾಜ ಲಾಡಕರ್, ಸಂತೋಷ ಪಾಟೀಲ, ಚಾಂದ ಖುರೇಶಿ,ಶಾಂತು ಅರಳಿ,ರಮೇಶ ಮಾಳಗೆ, ಸಂದೀಪ್ ತೀರ್ಥಾ, ಚಂದು ಮಾಲೆ, ಆಕಾಶ ಶಿಂಧೆ, ಸೋಮನಾಥ ಜ್ಯಾಂತೆ,ಹಸನ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್: ‘</strong>ವಿಜ್ಞಾನ ಮತ್ತು ಕಲಾ ವಸ್ತುಪ್ರದರ್ಶನ ಮಕ್ಕಳಲ್ಲಿನ ನಿಜವಾದ ಪ್ರತಿಭೆ ಹೊರತರಲು ಸಹಕಾರಿ ಆಗಿದೆ’ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಹಳ್ಳಿಖೇಡ್ ಬಿ.ಪಟ್ಟಣದ ಆರ್.ಜೆ. ಹಿಬಾರೆ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ಆಯೋಜಿಸಿದ್ದ ವಿಜ್ಞಾನ ಮತ್ತು ಕಲಾವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿಜ್ಞಾನಕ್ಕೆ ಸಂಬಂಧಿಸಿದ ನೂತನ ಮಾದರಿಗಳನ್ನು ಮಕ್ಕಳು ಮಾಡುವುದರಿಂದ ವೈಜ್ಞಾನಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಯಾವುದೇ ಸಂದೇಹವಿಲ್ಲ’ ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ನಾಗರಾಜ ಹಿಬಾರೆ ಮಾತನಾಡಿ, ‘ವಸ್ತುಪ್ರದರ್ಶನದಿಂದ ಮಕ್ಕಳಲ್ಲಿನ ನೈಜತೆ, ಕ್ರಿಯಾತ್ಮಕ ಚಟುವಟಿಕೆ, ಸುಪ್ತವಾದ ಪ್ರತಿಭೆ ಅರಳುತ್ತದೆ’ ಎಂದರು.</p>.<p>ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನದಲ್ಲಿ 500ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಸ್ತು ಪ್ರದರ್ಶನದಲ್ಲಿ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಐತಿಹಾಸಿಕ ಮತ್ತು ಭೌಗೋಳಿಕ ಹಾಗೂ ವೈಜ್ಞಾನಿಕ ಮಾದರಿಗಳು ಇದ್ದವು. ಬೇರೆ ಶಾಲೆಯಿಂದ ವಿದ್ಯಾರ್ಥಿಗಳು, ಪಾಲಕರು, ಸಾರ್ವಜನಿಕರು ಆಗಮಿಸಿ ಮಾದರಿಗಳನ್ನು ವೀಕ್ಷಿಸಿದರು.</p>.<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೇಶವರಾವ ತಳಘಟಕರ್, ರಾಹುಲ ಮಿಶ್ರಾ, ಸಂಸ್ಥೆಯ ಕಾರ್ಯದರ್ಶಿ ರುಚಿತಾ ನಾಗರಾಜ ಹಿಬಾರೆ, ಪುರಸಭೆ ಸದಸ್ಯ ಯುಸುಫ್ ಸೌದಾಗರ್, ಭೀಮರಾವ ನಾಯಕ್ , ಕೆ.ಶಿಲ್ಪಾವತಿ,</p>.<p>ಅಬ್ದುಲ್ ರಜಾಕ್, ಅಶೋಕ ಬಾವಗಿ, ಶಿವರಾಜ ಲಾಡಕರ್, ಸಂತೋಷ ಪಾಟೀಲ, ಚಾಂದ ಖುರೇಶಿ,ಶಾಂತು ಅರಳಿ,ರಮೇಶ ಮಾಳಗೆ, ಸಂದೀಪ್ ತೀರ್ಥಾ, ಚಂದು ಮಾಲೆ, ಆಕಾಶ ಶಿಂಧೆ, ಸೋಮನಾಥ ಜ್ಯಾಂತೆ,ಹಸನ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>